April 26, 2024

Bhavana Tv

Its Your Channel

ಶಾಸಕ ದಿನಕರ ಶೆಟ್ಟರಿಂದ ದಿನಸಿ ವಸ್ತುಗಳ ಕಿಟ್ ವಿತರಣೆ.

ಕರೋನಾ ಸುರಕ್ಷತೆಗಾಗಿ ದೇಶದ್ಯಾಂತ ಲಾಕ್ ಡೌನ್ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಪಡೆಯಲು ಹಣವಿಲ್ಲದೆ ಸಂಕಷ್ಟದಲ್ಲಿದ್ದರು. ಇಂತಹ ಸಂಕಷ್ಟದ ಸಮಯದಲ್ಲಿ ಕ್ಷೇತ್ರದ ಬಡ ಜನತೆಗೆ ನೆರವಾಗುವ ದೃಷ್ಟಿಯಿಂದ ಅನೇಕ ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ವಿತರಿಸುವ ಕಾರ್ಯ ಮಾಡುತ್ತಿದ್ದರು. ಇದರಂತೆ ಹೊಸಾಕುಳಿ ಗ್ರಾಮ ಪಂಚಾಯತಿಯ ೬೦ಕ್ಕೂ ಅಧಿಕ ಬಡ ಕುಟುಂಬಗಳಿಗೆ ಶಾಸಕ ದಿನಕರ ಶೆಟ್ಟಿ ದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು.
ಈ ಸಂರ್ಭದಲ್ಲಿ ಪಂಚಾಯತ ಅಧ್ಯಕ್ಷರಾದ ಸುರೇಶ ಶೆಟ್ಟಿ, ಮುಗ್ವಾ ಪಂಚಾಯತಿ ಅಧ್ಯಕ್ಷ ಟಿ.ಎಸ್.ಹೆಗಡೆ, ಬಿಜೆಪಿ ತಾಲೂಕ ಅಧ್ಯಕ್ಷ ರಾಜೇಶ ಭಂಡಾರಿ, ಜಿಲ್ಲಾ ಪಂಚಾಯತ ಸದಸ್ಯೆ ಶ್ರೀಕಲಾ ಶಾಸ್ತ್ರಿ,ಮುಖಂಡರಾದ ಎ???ಸ್.ಹೆಗಡೆ,ಸುಬ್ರಹ್ಮಣ್ಯ ಶಾಸ್ತ್ರಿ, ದತ್ತಾತ್ರೇಯ ಮೇಸ್ತ, ನಾರಾಯಣ ಹೆಗಡೆ ಸುಭಾಸ ಗೌಡ ಸೇರಿದಂತೆ ಪ್ರಮುಖರು ಉಪಸ್ತಿತರಿದ್ದರು.

error: