
ಭಟ್ಕಳ : ಕೊರೋನಾ ಲಾಕಡೌನ್ನಿಂದ ಸಂಕಷ್ಟದಲ್ಲಿರುವ ಸಂಘದ ೧೦ ಮಂದಿ ಪಿಗ್ಮಿ ಸಂಗ್ರಾಹಕರಿಗೆ ಮತ್ತು ಸಂಕಷ್ಟದಲ್ಲಿರುವ ೪೦ಕ್ಕೂ ಅಧಿಕ ಜನರಿಗೆ ಗುರುಕೃಪಾ ಪತ್ತಿನ ಸಹಕಾರಿ ಸಂಘದಿoದ ದಿನಸಿ ಕಿಟ್ ವಿತರಿಸಲಾಯಿತು.
ಸಂಘದಿoದ ಮುಖ್ಯಮಂತ್ರಿ ಪರಿಹಾರ ನಿಧಿಗೂ ೨೫ ಸಾವಿರ ರೂಪಾಯಿ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸುರೇಶ ನಾಯ್ಕ, ನಮ್ಮ ಸಂಘದಿoದ ೪೦ ಮಂದಿ ಬಡವರಿಗೆ ದಿನಸಿ ಕಿಟ್ ವಿತರಿಸಲಾಗಿದೆ. ಅದರಂತೆ ಸಂಕಷ್ಟದಲ್ಲಿರುವ ಪಿಗ್ಮಿ ಸಂಗ್ರಾಹಕರ ಗಮನಿಸಿ ಅವರಿಗೂ ಕೂಡ ಅಗತ್ಯ ದಿನಸಿ ಸಾಮಗ್ರಿಯುಳ್ಳ ಕಿಟ್ ವಿತರಿಸಲಾಗಿದೆ. ಅದಲ್ಲದೇ ಮುಖ್ಯಮಂತ್ರಿ ಪರಿಹಾರ ನಿಧಿಗೂ ಸಹ ೨೫ ಸಾವಿರ ರೂಪಾಯಿಯನ್ನು ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ ನಾಯ್ಕ, ಪ್ರಧಾನ ವ್ಯವಸ್ಥಾಪಕ ವಾಸುದೇವ ನಾಯ್ಕ, ನಿರ್ದೇಶಕರಾದ ಮೋಹನ ನಾಯ್ಕ, ವೆಂಕಟೇಶ ನಾಯ್ಕ, ನಾರಾಯಣ ನಾಯ್ಕ, ಕುಮಾರ ನಾಯ್ಕ, ರಾಜೇಶ ನಾಯ್ಕ ಮುಂತಾದವರಿದ್ದರು.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು