ಭಟ್ಕಳ: ಕೋವಿಡ್ ೧೯ ತುರ್ತು ಪರಿಸ್ಥಿತಿಯಲ್ಲಿ ತಮ್ಮ ಸ್ವಂತ ಹಣವನ್ನು ಹಾಗೂ ಕೇಲವು ದಾನಿಗಳ ಸಹಾಯದಿಂದ ಹಣ ಸಂಗ್ರಹಿಸಿ ಭಟ್ಕಳ ಸರ್ಪನಕಟ್ಟೆ ಸ್ಪೋರ್ಟ್ಸ್ ಕ್ಲಬ್ ಹಸಿದವರಿಗೆ ಅನ್ನ ನೀಡುತ್ತಿದೆ. ಭಟ್ಕಳ ತಾಲ್ಲೂಕಿನ ಶ್ರೇಷ್ಠ ಕಬಡ್ಡಿ ತಂಡ ಪರಶುರಾಮ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರು ಪರಶುರಾಮ ಜಯಂತಿಯoದು ಸರ್ಪನಕಟ್ಟೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅನ್ನ ದಾನ ಮಾಡುತ್ತಿದ್ದ ಅವರಿಗೆ ಒಂದು ದಿನದ ಅನ್ನದಾನದ ಸಂಪೂರ್ಣ ವೆಚ್ಚವನ್ನು ಭರಿಸುವ ಮುಖಾಂತರ ಪರಶುರಾಮ ಜಯಂತಿ ವಿಭಿನ್ನ ವಾಗಿ ಆಚರಣೆ ಮಾಡಿದ್ದಾರೆ. ಬಡವರಿಗೆ ಊಟವನ್ನು ನೀಡಿದ ಪರಶುರಾಮ ಸ್ಪೋರ್ಟ್ಸ್ ಕ್ಲಬ್ ಕಾರ್ಯಕ್ಕೆ ಸರ್ಪನಕಟ್ಟೆ ಸ್ಪೋರ್ಟ್ಸ್ ಕ್ಲಬ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಎರಡು ಸ್ಪೋರ್ಟ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.