April 25, 2024

Bhavana Tv

Its Your Channel

ಉತ್ತರ ಕನ್ನಡ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನ ಮಾರಾಟ ಹಾಗೂ ಬಳಕೆ ನಿಷೇಧ!!!

ಕಾರವಾರ:- ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಕೋವಿಡ್-೧೯ ಹತೋಟಿಗೆ ಬರುವವರೆಗೂ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.

ಪಾನ್ ಮಸಾಲಾ ಮತ್ತು ಅಡಿಕೆಯಿಂದ ತಯಾರಾದ ಉತ್ಪನ್ನಗಳನ್ನು ತಿಂದು ಉಗುಳುವುದರಿಂದ ಕೋವಿಡ್ -೧೯ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುವ ಸಾಧ್ಯತೆ ಇರುವದರಿಂದ ಹೊಗೆ ರಹಿತ ತಂಬಾಕು ಉತ್ಪನ್ನಗಳನ್ನು ಮಾರಾಟ ಮತ್ತು ಬಳಕೆ ಮಾಡುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ್ ಕೆ ಅವರು ಆದೇಶ ಹೊರಡಿಸಿದ್ದಾರೆ.

ಒಂದು ವೇಳೆ ಈ ಆದೇಶವನ್ನು ಉಲ್ಲಂಘಸಿದ್ದಲ್ಲಿ, ಸಾಂಕ್ರಾಮಿಕ ರೋಗಗಳ ಕಾಯ್ದೆ-೧೮೯೭, ವಿಪತ್ತು ನಿರ್ವಹಣಾ ಕಾಯ್ದೆ-೨೦೦೫, ಐಪಿಸಿ-೧೯೬೦, ಸಿ.ಆರ್.ಪಿ.ಸಿ.ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬoಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

error: