
ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಇದೇ ತಿಂಗಳ 13 ನೇ ತಾರೀಖಿನಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಹಲವು ಸಂಘಟನೆಗಳು ಕನ್ನಡಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ. ಲಾರಿ ಮಾಲೀಕರ ಸಂಘ, ಸಿಐಟಿಯು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ಇನ್ನೂ ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ.
ಹೊಟೆಲ್ ಮಾಲೀಕರ ಸಂಘವು ಬಂದ್ ಗೆ ನೈತಿಕ ಬೆಂಬಲವನ್ನಷ್ಟೆ ವ್ಯಕ್ತಪಡಿಸಿದೆ. ಬಿಎಂಟಿಸಿ-ಕೆಎಸ್ಆರ್ಟಿಸಿ ಸಂಘಗಳು ಬಂದ್ ನಿಂದ ಹೊರಗೆ ಉಳಿದಿವೆ.
ಸರೋಜಿನಿ ಮಹಿಷಿ ಸಮಿತಿಯ ವರದಿ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ತತ್ಕ್ಷಣವೇ ವರದಿ ಅನುಷ್ಠಾನ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿ ಈ ಬಂದ್ ಗೆ ಕರೆ ನೀಡಿವೆ
More Stories
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.
ಭಟ್ಕಳದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್ ,