![](https://kannada.bhavanatv.com/wp-content/uploads/2020/05/WhatsApp-Image-2020-04-29-at-8.41.09-PM.jpeg?v=1588304895)
ಹೊನ್ನಾವರ ; ಶ್ರೀ ಜಿ. ಎ. ನಾಯ್ಕ್ ಇವರು ೩೦-೪-೨೦೨೦ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ, ಶ್ರೀಯುತರು ೨೬-೯-೧೯೮೬ ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಯಲ್ಲಿ ಸಹ ಶಿಕ್ಷಕರಾಗಿ ಸೇವೆ ಆರಂಭಿಸಿ, ನಂತರ ಅಳ್ಳಂಕಿ, ಮಂಕಿ, ಭಟ್ಕಳ್ ತಾಲೂಕಿನಲ್ಲಿ ಸೇವೆ ಸಲ್ಲಿಸಿದರು. ನಂತರ ಮುಖ್ಯಾಧ್ಯಾಪಕರಾಗಿ ಪದೋನ್ನತಿ ಹೊಂದಿ ಇಡುಗುಂಜಿ ಮತ್ತು ಪ್ರಭಾತ್ ನಗರ ಹೈಸ್ಕೂಲ್ ನಲ್ಲಿ ಸೇವೆ ಸಲ್ಲಿಸುತ್ತಾ ಪ್ರಸ್ತುತ ಹೊನ್ನಾವರ ತಾಲೂಕಿನಲ್ಲಿ ಪ್ರಭಾರೆ ಕ್ಷೇತ್ರ ಶಿಕ್ಷಣಾಧಿಕಾರಿ ಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವಾನುಭವ ಹೊಂದಿರುವ ಇವರು ಹೊನ್ನಾವರ ತಾಲೂಕಿನ ಶಿಕ್ಷಕ ವೃಂದದ ಪ್ರೀತಿಗೆ ಪಾತ್ರರಾಗಿದ್ದರು. ಇವರು ಶಿಕ್ಷಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಪರಿಹರಿಸಲು ಪ್ರಯತ್ನಿಸುತ್ತಿದ್ದುದು ಶ್ಲಾಘನೀಯ. ಈ ಹಿಂದೆ ಇವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿರುತ್ತಾರೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.