
ಭಟ್ಕಳ: ಕೊರೋನಾ ವೈರಸ್ ತಡೆಗಟ್ಟಲು ಶ್ರಮಿಸಿದ ತಾಲೂಕಿನ ಅಧಿಕಾರಿಗಳಿಗೆ, ಪೊಲೀಸರಿಗೆ ಶಾಸಕ ಸುನೀಲ ನಾಯ್ಕ ಶನಿವಾರದಂದು ಅಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಿದರು.

ಜಿಲ್ಲೆಯೊಂದರಲ್ಲೇ ತಾಲೂಕಿನಲ್ಲಿ 10 ಕೊರೋನಾ ಸೋಂಕಿತರು ಪತ್ತೆಯಾಗಿದ್ದವು. ಆದರೆ ಕಂಡು ಬಂದ 10 ಪಾಸಿಟಿವ್ ಪ್ರಕರಣದ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಭಟ್ಕಳ ಕೋರೋನಾ ಪ್ರಕರಣದಿಂದ ಮುಕ್ತರಾಗುವಂತೆ ಮಾಡಿದ ತಾಲೂಕಾಢಳಿತ ಅಧಿಕಾರಿಗಳು, ಪೊಲೀಸರ ಶ್ರಮವನ್ನು ಗುರುತಿಸಿದ ಶಾಸಕ ಸುನೀಲ ನಾಯ್ಕ ಸಹಾಯಕ ಆಯುಕ್ತ ಭರತ್ ಎಸ್., ಡಿವೈಎಸ್ಪಿ ಗೌತಮ್ ಕೆ.ಸಿ., ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್, ತಾಲೂಕಾ ವೈದ್ಯಾಧಿಕಾರಿ ಮೂರ್ತಿರಾಜ ಭಟ್, ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ್ ಚಿಕ್ಕನ ಮನೆ, ಅಗತ್ಯ ವಸ್ತುಗಳ ಪೂರೈಕೆ ವಿಭಾಗದ ನೋಡಲ್ ಅಧಿಕಾರಿ ಸಾಜಿದ್ ಮುಲ್ಲಾ ಅವರಿಗೆ ಗೌರವಿಸಿ ಸನ್ಮಾನಿಸಿದರು.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.