ಹೊನ್ನಾವರ ; ಕರೋನಾ ಸಂಕಷ್ಟದ ಸಮಯದಲ್ಲಿ ಸಾರ್ವಜನಿಕರಿಗೆ ಸರ್ಕಾರ ಹಲವು ರೀತಿಯಲ್ಲಿ ನೆರವಾಗುತ್ತಿದೆ. ಸರಕಾರಕ್ಕೆ ಆರ್ಥಿಕ ಸಹಾಯ ಬೇಕಾಗಿದೆ, ಸರ್ಕಾರಕ್ಕೆ ಆರ್ಥಿಕ ಸಹಾಯ ಮಾಡುವ ಉದ್ದೇಶದಿಂದ ಹೊನ್ನಾವರ ತಾಲೂಕಿನ ನಗರೆ ಬೇರೊಳ್ಳಿ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಆಡಳಿತ ಕಮೀಟಿಯವರು ಪ್ರಧಾನಮಂತ್ರಿ ಪರಿಹಾರ ನಿಧಿಗೆ ೨೫,೦೦೦/-ರೂಪಾಯಿ ಮೊತ್ತದ ಚೆಕ್ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಮೂಲಕ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಮಂಡಲ ಅಧ್ಯಕ್ಷ ರಾಜೇಶ ಭಂಡಾರಿ, ಅರ್ಚಕರಾದ ಅನಂತ ಭಟ್, ಮುಖಂಡರಾದ ಹರೀಶ ಪ್ರಭು, ಗಣಪತಿ ನಾಯ್ಕ ಬಿಟಿ, ಪ್ರಮೋದ ಜೋಶಿ, ಸೀತಾರಾಮ ನಾಯ್ಕ, ಅಶೋಕ ನಾಯ್ಕ, ಚಂದ್ರು ನಾಯ್ಕ ಹಾಗೂ ಮುಖಂಡರು ಉಪಸ್ಥಿತರಿದ್ದರು.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ