ಹೊನ್ನಾವರ:ಹಲವು ವರ್ಷ ಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ತಾಲ್ಲೂಕಿನ ಕೆಳಗಿನೂರು ಗ್ರಾಮಪಂಚಾಯತ ಕರುಣಾಲಯ ಟ್ರಸ್ಟ್ ನಿಂದ ತಾಲ್ಲೂಕಿನ ಹಲವೆಡೆಗಳಲ್ಲಿ ಆಹಾರ ಸಾಮಗ್ರಿಗಳ ಕಿಟ್ನ್ನು ವಿತರಿಸಿ ಜನರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಲಾಕಡೌನ ಹಿನ್ನೆಲೆಯಲ್ಲಿ ಕಡುಬಡವರು ಸಾಕಷ್ಟು ಸಂಕಷ್ಟಗಳಿಗೆ ಸಿಲುಕಿದ್ದು ಅಂತವರಿಗೆ ಕೆಳಗಿನೂರು ಗ್ರಾಮಪಂಚಾಯತ ಕರುಣಾಲಯ ಟ್ರಸ್ಟವತಿಯಿಂದ ಮಂಕಿ ಹಾಗೂ ಕಾಸರಕೋಡ ಸೇರಿದಂತೆ ಹಲವೆಡೆಗೆ ಸುಮಾರು ೨೫೦ಕ್ಕೂ ಹೆಚ್ಚಿನ ಕಿಟ್ಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಕರುಣಾಲಯ ಟ್ರಸ್ಟ್ ಅಧ್ಯಕ್ಷ ಲೂಕಾಸ್ ಫರ್ನಾಂಡೀಸ್ ಹಾಗೂ ಅವರ ಪತ್ನಿ ಗ್ರಾಮಪಂಚಾಯತ ಸದಸ್ಯೆ ಆಗ್ನೇಸ್ ಫರ್ನಾಂಡೀಸ್ ಈ ಸಮಾಜಮುಖಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.