ಕುಮಟಾ ; ಸರ್ಕಾರ ಮದ್ಯ ಮಾರಾಟಕ್ಕೆ ಮೇ. ೪ ರಿಂದ ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ಮೊದಲ ದಿನವೇ ಮದ್ಯದಂಗಡಿಗಳೆದುರು ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಗುರುತು ಹಾಕಿದ್ದು ಕೆಲವೆಡೆ ಸರತಿ ಸಾಲಿಗಾಗಿ ರಕ್ಷಣಾ ಬೇಲಿಗಳನ್ನು ಹಾಕಲಾಗಿತ್ತು. ಪೊಲೀಸರು ಕೂಡಾ ಹೆಚ್ಚಿನ ನಿಗಾ ವಹಿಸಿದ್ದರು.
ಸೋಮವಾರ ಬೆಳಿಗ್ಗೆ ಮದ್ಯದಂಗಡಿಗಳು ತೆರೆಯುವ ಮುನ್ನವೇ ಅಬಕಾರಿ ಉಪ ಅಽಕ್ಷಕ ಸಂತೋಷ ಕುಡಾಳಕರ ಆಗಮಿಸಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ಯ ಖರೀದಿಗೆ ಬಂದವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಎಲ್ಲೆಡೆ ಸೂಕ್ತ ಮುಂಜಾಗ್ರತೆ ಕೈಗೊಳ್ಳಲಾಗಿದೆ. ಪ್ರತಿಯೊಬ್ಬರಿಗೂ ನಿಗದಿತ ಪ್ರಮಾಣದಲ್ಲೇ ಮದ್ಯ ಖರೀದಿಗೆ ಅವಕಾಶವಿದೆ. ನಿಗದಿತ ಸಮಯಾವಕಾಶದ ಬಳಿಕವೂ ಮಾರಾಟ ನಡೆಸುವುದು ಕಂಡುಬಂದಲ್ಲಿ ಮದ್ಯದಂಗಡಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.