
ಹೊನ್ನಾವರ ; ರಾಜ್ಯದ ಕೃಷಿ ಸಚೀವರಾದ ಬಿ.ಸಿ ಪಾಟೀಲ ಉಡುಪಿಗೆ ತೆರಳುವ ಮಾರ್ಗ ಮಧ್ಯೆ ಹೊನ್ನಾವರದ ಶರಾವತಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿದರು. ತಾಲೂಕಿನಲ್ಲಿ ಅಕಾಲಿಕವಾಗಿ ಸುರಿದ ಗಾಳಿ ಮಳೆಗೆ ಕೃಷಿ ತೋಟಗಾರಿಕೆ ಬೆಳೆಗೆ ಆದ ಹಾನಿಗೆ ಸರ್ಕಾರದಿಂದ ಪರಿಹಾರ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ವಿವಿಧ ಜಿಲ್ಲೆಯಲ್ಲಿ ಅಂತಹ ಸಮಸ್ಯೆ ಇದುವರೆಗೆ ಎದುರಾದಂತೆ ಕಾಣುತ್ತಿಲ್ಲ. ಕೆಲವಡೆ ಗಾಳಿ ಮಳೆಗೆ ಕೃಷಿ ಬೆಳೆಗೆ ಹಾನಿ ಸಂಭವಿಸಿದ್ದಲ್ಲಿ ಅಧಿಕಾರಿಗಳಖಿಂದ ವರದಿ ಪಡೆದು ಸರ್ಕಾರದಿಂದ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂಧರ್ಬದಲ್ಲಿ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ, ಬಿಜೆಪಿ ಮಂಡಲಾಧ್ಯಕ್ಷ ರಾಜೇಶ ಭಂಡಾರಿ ಪಟ್ಟಣ ಪಂಚಾಯತ ಸದಸ್ಯ ಶಿವರಾಜ ಮೇಸ್ತ, ವಿಜು ಕಾಮತ್, ಮುಖಂಡರಾದ ಲೋಕೇಶ ಮೇಸ್ತ, ದತ್ತಾತ್ರೇಯ ಮೇಸ್ತ ಹಾಜರಿದ್ದರು.

More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.