
ಕಾರವಾರ: ಕೊರೊನಾ ಸೋಂಕಿನ ಆತಂಕದ ನಡುವೆಯೂ ವಲಸೆ ಕಾರ್ಮಿಕರನ್ನು ತವರು ಜಿಲ್ಲೆಗಳಿಗೆ ತಲುಪಿಸಿದ ಕಾರವಾರ ಹಾಗೂ ಅಂಕೋಲ ಭಾಗದ ಕೆಎಸ್ಆರ್ಟಿಸಿ ಸಿಬ್ಬಂದಿಗೆ ಹೂಮಳೆಗೈಯುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅಭಿನಂದಿಸಿದರು.
ಲಾಕ್ಡೌನ್ನಿಂದಾಗಿ 40 ದಿನಗಳಿಗೂ ಹೆಚ್ಚು ಕಾಲ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರನ್ನು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ತಲುಪಿಸಿದ್ದರು. ಅಲ್ಲದೆ, ರೆಡ್ ಝೋನ್ ಪ್ರದೇಶಗಳಿಗೂ ತೆರಳಿ ಕಾರ್ಮಿಕರನ್ನು ಮನೆ ಸೇರುವಂತೆ ಮಾಡಿದ್ದರು. ಈ ಕಾರಣದಿಂದ ಕಾರವಾರದಲ್ಲಿ ಇಂದು 15 ಸಿಬ್ಬಂದಿಗೆ ಪುಷ್ಪವೃಷ್ಠಿಗೈಯ್ಯುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.