ಭಟ್ಕಳ : ಕೊರೋನಾ ಸೋಂಕಿನ ಶಂಕೆಯ ಮೇಲೆ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದ್ದವರ ಪೈಕಿ ಏಳು ಮಂದಿಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎನ್ನಲಾಗಿದೆ .
ನಿನ್ನೆ ಒಂದೇ ದಿನ 12 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು , ಅವರ ಸಂಪರ್ಕದಲ್ಲಿದ್ದ ಸುಮಾರು 60 ಜನರ ಗಂಟಲು ದ್ರವದ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು . ಅದರಂತೆ , ನಿನ್ನೆ ದೃಢಪಟ್ಟಿದ್ದವರಲ್ಲಿನ ವ್ಯಕ್ತಿಯೊಬ್ಬರ ಕುಟುಂಬದ ಆರು ಮಂದಿಗೆ ಹಾಗೂ ಅವರ ಸ್ನೇಹಿತರೊಬ್ಬರನ್ನು ಸೇರಿ ಒಟ್ಟು ಏಳು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದ್ದು , ಈ ಬಗ್ಗೆ ಮಧ್ಯಾಹ್ನ 12 ಗಂಟೆಗೆ ಬರಲಿರುವ ಹೆಲ್ತ್ ಬುಲೆಟಿನ್ ನಲ್ಲಿ ಖಚಿತವಾಗಲಿದೆ . ಸದ್ಯ ಇಂದು ದೃಢಪಟ್ಟವರು ನಗರದ ಹೃದಯ ಭಾಗದ ಓಣಿಯಲ್ಲಿದ್ದವರು ಎನ್ನಲಾಗಿದ್ದು , ಇದು ಮತ್ತಷ್ಟು ಆತಂಕ ಸೃಷ್ಟಿಗೆ ಕಾರಣವಾಗಿದೆ . ಈ ಏಳು ಮಂಧಿಯಲ್ಲಿನ ಸೋಂಕಿನ ಪ್ರಕರಣ ದೃಢಪಟ್ಟರೆ ಸದ್ಯ ಪಟ್ಟಣವೊಂದರಲ್ಲೇ ಒಟ್ಟು 31 ಪ್ರಕರಣಗಳು ಪತ್ತೆಯಾದಂತಾಗುತ್ತದೆ . 11 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು , ಸದ್ಯ 20 ಸಕ್ರಿಯ ಪ್ರಕರಣಗಳು ಇದ್ದಂತಾಗಿದೆ . ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇರುವುದು ಇದೀಗ ಭಟ್ಕಳ ಮಾತ್ರವಲ್ಲ , ಇಡೀ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ .
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.