
ಭಟ್ಕಳ : ಸರ್ಕಾರದ ಆದೇಶದಂತೆ ಕೊರೊನಾ ಕಡಿವಾಣಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ತಾಲೂಕಿನಲ್ಲಿ ಅನಗತ್ಯವಾಗಿ ರಸ್ತೆಯಲ್ಲಿ ಓಡಾಡಿದ ೮ ಮಂದಿಯ ಮೇಲೆ ತಲಾ ರೂ. ೧೦೦ ರಂತೆ ಪುರಸಭೆ ದಂಡ ವಿಧಿಸಿದೆ.
ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಸೋಜಿಯಾ ಸೋಮನ್ ಹಾಗೂ ಅವರ ಸಿಬ್ಬಂದಿ ಎರಡು ದಿನದಿಂದ ಮಾಸ್ಕ ಇಲ್ಲದೆ ಓಡಾಡುವ ಜನರಿಗೆ ದಂಡ ಹಾಕುವ ಕಾರ್ಯಾಚರಣೆಗೆ ಇಳಿದಿದೆ. ಮಾಸ್ಕ್ ಧರಿಸದೆ ರಸ್ತೆಯಲ್ಲಿ ಸುತ್ತಾಡುವವರನ್ನು ಹಿಡಿದು ತಲಾ ೧೦೦ ರೂ. ದಂಡ ಹಾಕಲಾಗಿದೆ.ಮೊದಲ ದಿನದಂದು ಪಟ್ಟಣದ ರಂಗೀಕಟ್ಟೆ, ತಾಲೂಕು ಪಂಚಾಯತ್ ಕಾರ್ಯಾಲಯ ಎದುರು ಹಾಗೂ ಮುಖ್ಯ ರಸ್ತೆಯಲ್ಲಿ ನಿಂತುಕೊoಡು ಮಾಸ್ಕ್ ಧರಿಸದೆ ಇರುವವರಿಗೆ ದಂಡ ವಿಧಿಸಿದ್ದಲ್ಲದೆ, ಅವರಿಗೆ ಒಂದೊAದು ಮಾಸ್ಕ್ನ ಉಚಿತವಾಗಿ ನೀಡಿ ಕಳುಹಿಸಿದರು. ೨ನೇ ದಿನದಂದು ಮಣ್ಕುಳಿ, ರಘುನಾಥ ರಸ್ತೆ, ಚೌಥನಿ, ಹೂವಿನಪೇಟೆ ರಸ್ತೆಯಲ್ಲಿ ಕಾರ್ಯಾಚರಣೆಗಿಳಿದು ದಂಡ ವಿಧಿಸಿ ಉಚಿತ ಮಾಸ್ಕ್ ವಿತರಿಸಿದ್ದಾರೆ.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು