
ಭಟ್ಕಳ; ತಾಲೂಕಿನ ಬೆಂಗ್ರೆ ಪಂಚಾಯತ್ ವ್ಯಾಪ್ತಿಯ ಪಡುಶಿರಾಲಿ ಮಜಿರೆಯಲ್ಲಿ ಸರಿ ಸುಮಾರು ೩೦ ಮನೆಗಳಿಗೆ ಸಂಪರ್ಕಿಸುವ ನೂತನ ರಸ್ತೆಯನ್ನು ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಮಂಗಳವಾರ ಶಾಸಕ ಸುನೀಲ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಶಾಸಕರು ಹಲವಾರು ವರ್ಷಗಳಿಂದ ಇಲ್ಲಿ ಸ್ಥಳಾವಕಾಶದ ಸಮಸ್ಯೆ ಇದ್ದು ರಸ್ತೆಯ ಸಂಪರ್ಕವೇ ಇಲ್ಲಾದಂತಾಗಿತ್ತು. ಎಲ್ಲಾ ಸಮಸ್ಯೆಗಳನ್ನು ಊರಿನ ಮುಖಂಡರ ಸಮ್ಮುಖದಲ್ಲಿ ಬಗೆಹರಿಸಿ ರಸ್ತೆ ನಿರ್ಮಾಣವನ್ನು ಮಾಡಿಕೊಡಲಾಗಿದ್ದು ಕಾಮಗಾರಿ ಗುಣಮಟ್ಟ ಉಳ್ಳದಾಗಿದೆ. ಕೆಲ ದಿನಗಳಲ್ಲಿ ರಸ್ತೆ ಕಾಮಗಾರಿ ಮುಗಿಯಲಿದ್ದು ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಇದನ್ನು ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಗ್ರಾಮದ ಇನ್ನು ಹಲವು ಸಮಸ್ಯೆ ಬಗೆಹರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ