
ಭಟ್ಕಳ: ಕೋರೋನಾ ಹಿನ್ನೆಲೆ ಜನರ ಸೇವೆಗಾಗಿ ತಾಲ್ಲೂಕಾಡಳಿತದಿಂದ ಪಾಸ್ ಪಡೆದು ಉಚಿತ ಸೇವೆ ನೀಡಿದ ಹಿನ್ನೆಲೆಯಲ್ಲಿ ಆಟೋ ಚಾಲಕನೋರ್ವ ಕೋರೋನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಕೋರೊನಾ ಸೊಂಕಿತನಾಗಿದ್ದರಿAದ ಚಾಲಕನಿಗೆ ಸರಿಯಾದ ಚಿಕಿತ್ಸೆ ನೀಡಬೇಕೆಂದು ಭಟ್ಕಳ ಅಟೋ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ಕೃಷ್ಣ ನಾಯ್ಕ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಮಾನವೀಯ ದೃಷ್ಟಿಯಲ್ಲಿ ಜನರಿಗೆ ತುರ್ತು ಆರೋಗ್ಯ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗಬಾರದೆಂದು ಪಟ್ಟಣದ ಬದ್ರಿಯಾ ಕಾಲೋನಿಯ ಆಟೋರಿಕ್ಷಾ ಚಾಲಕ ಪಾಸ್ ಪಡೆದು ಉಚಿತ ಸೇವೆ ನೀಡಲು ಮುಂದೆ ಬಂದಿದ್ದಾನೆ. ಈ ಮಧ್ಯೆ ಯಾರೋ ಓರ್ವ ಸೋಂಕಿತರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಬಿಡಲಾಗಿದ್ದು, ಆತನಿಗೆ ಇದ್ಯಾವುದರ ಅರಿವಿಲ್ಲವಾಗಿದೆ. ಈಗ ಈತನಿಗೆ ಕೋರೋನಾ ರೋಗ ದೃಡಪಟ್ಟಿದ್ದು ಆತನಿಗೆ ಸರಿಯಾದ ಚಿಕಿತ್ಸೆ ನೀಡಬೇಕೆಂದು ಹಾಗೂ ಇತನು ಬಡವನಾಗಿದ್ದು ಯಾವುದೇ ನಿಷ್ಕಾಳಜಿ ಮಾಡದೇ ಸೂಕ್ತ ಚಿಕಿತ್ಸೆ ನೀಡಿ ಗುಣಮುಖನಾಗಿ ಬರುವಂತೆ ಮಾಡಬೇಕು ಎಂದು ಜಿಲ್ಲಾಡಳಿತ, ತಾಲೂಕಾಡಳಿತ ಹಾಗೂ ಆರೋಗ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು