
ಹೊನ್ನಾವರ: ಹೊನ್ನಾವರದ ಮಾಜಿ ಪಟ್ಟಣ ಪಂಚಾಯತ ಸದಸ್ಯ ಬಾಲಕೃಷ್ಣ ಬಾಳೇರಿ ನೇತ್ರತ್ವದಲ್ಲಿ ಸಮಾನ ಮನಸ್ಸಿನ ಸಾಮಾಜಿಕ ಕಾರ್ಯಕರ್ತರು ಒಟ್ಟಾಗಿ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರೋನಾ ವಾರಿಯರ್ಸಗೆ ವಿತರಿಸಿದರು
ತಾಲೂಕಿನ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರೋನಾ ವಾರಿಯರ್ಸಗಳಾದ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ತಾಲೂಕು ಆಡಳಿತ, ಪಟ್ಟಣ ಪಂಚಾಯತಿ ಸಿಬ್ಬಂದಿ, ಪೊಲೀಸ್ ಹಾಗೂ ಪೌರ ಕಾರ್ಮಿಕರಿಗೆ ಬುಧವಾರ ಮಧ್ಯಾಹ್ನ ಭೋಜನ ವ್ಯವಸ್ಥೆ ಕಲ್ಪಿಸಿ ಗೌರವಿಸಿದರು.
ಈ ಸಂದರ್ಬದಲ್ಲಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಸದಾನಂದ ಭಟ್ಟ
ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಬಾಲಕೃಷ್ಣ ಬಾಳೇರಿ, ಬಳಗದ ಸದಸ್ಯರಾದ ಎಂ.ಎಸ್.ಹೆಗಡೆ, ಉಮೇಶ ನಾಯ್ಕ, ಉಮೇಶ ಮೇಸ್ತ, ಸುಬ್ರಾಯ ನಾಯ್ಕ ಮಂಕಿ, ಶಿವರಾಜ ಮೇಸ್ತ, ಸುಬ್ರಹ್ಮಣ್ಯ ಶಾಸ್ತಿç, ಎಂ.ಜಿ.ಭಟ್ಟ, ದೀಪಕ ಶೇಟ್, ಉಮೇಶ ತಾಂಡೇಲ್, ಚಂದನ ಪ್ರಭು, ಪರಮೇಶ್ವರ ನಾಯ್ಕ, ವಿನಾಯಕ ಆಚಾರಿ, ವೈದ್ಯರಾದ ಡಾ. ಆಶಿಕ್ ಹೆಗ್ಡೆ, ಡಾ. ಮಂಜುನಾಥ ಶೆಟ್ಟಿ ಮತ್ತಿತರರು ಭೋಜನವನ್ನು ವಿತರಿಸಿದರು.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು