![](https://kannada.bhavanatv.com/wp-content/uploads/2020/05/vlcsnap-2020-05-14-17h14m16s419-2.png?v=1589457257)
ಭಟ್ಕಳ: ಮಳೆಗಾಲ ಆರಂಭವಾದ ಬಳಿಕ ಐ. ಆರ್.ಬಿ ಕಂಪನಿ ನಡೆಸುವ ರಾಷ್ಟೀಯ ಹೆದ್ದಾರಿ ಕಾಮಗಾರಿಯಿಂದ ಉದ್ಬವಿಸಬಹುದಾದ ಸಮಸ್ಯೆಗಳನ್ನು ಈಗಲೇ ಬಗೆಹರಿಸುವಂತೆ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಯ್ಕ ಅಧಿಕಾರಿಗಳಿಗೆ ಮತ್ತು ಕಂಪನಿಯವರಿಗೆ ಈ ಹಿಂದಿನ ಸಭೆಯಲ್ಲಿ ಸೂಚಿಸಿದ್ದರು. ಇನ್ನು ಒಂದು ತಿಂಗಳೊಳಗೆ ಮಳೆಗಾಲ ಆರಂಭವಾಗುವದರಿoದ ಗುರುವಾರ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಅವೈಜ್ಞಾನಿಕವಾಗಿ ಈ ಹಿಂದೆ ನಡೆದ ಕಾಮಗಾರಿಯಿಂದ ಕಳೆದ ಮಳೆಗಾಲದಲ್ಲಿ ಶಿರಾಲಿಯ ಜನತಾ ವಿದ್ಯಾಲಯದ ಸುತ್ತ ಮುತ್ತ ಸಂಪೂರ್ಣ ರಸ್ತೆ, ಹಿತ್ತಲುಗಳು ಜಲಾವೃತಗೊಂಡು ಅಪಾರ ಹಾನಿ ಸಂಭವಿಸಿದ್ದಲ್ಲದೆ ಜನರು ಸಂಕಷ್ಟಕ್ಕೀಡಾಗಿದ್ದರು. ಆದರೆ ಈ ಬಾರಿ ಈ ಸಮಸ್ಯೆ ಮತ್ತೆ ಸಂಭವಿಸಬಾರದು. ಅಲ್ಲದೇ ಈ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಐ ಆರ್ ಬಿ ಅಭಿಯಂತರರನ್ನು ಹಾಗೂ ಭಟ್ಕಳ ಸಹಾಯಕ ಆಯುಕ್ತರನ್ನು ಮತ್ತು ತಹಶೀಲ್ದಾರರನ್ನು ಸ್ಥಳಕ್ಕೆ ಕರೆಯಿಸಿ ಊರಿನ ನಾಗರಿಕರ ಸಮ್ಮುಖದಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಯಾವ ರೀತಿ ಮಾಡಬಹುದು ಎಂದು ಚರ್ಚಿಸಲಾಯಿತು. ಈ ಬಗ್ಗೆ ಅಂತಿಮವಾಗಿ ಯಾವ ರೀತಿಯಾಗಿ ಕಾಮಗಾರಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿ ಕೊಡಲಾಗಿತು. ಅದರಂತೆ ಸಮಸ್ಯೆ ಆಗುವ ಜಾಗಗಳನ್ನು ಅಧಿಕಾರಿಗಳಿಗೆ ತೋರಿಸಿ, ಮಳೆಗಾಲ ಪ್ರಾರಂಭವಾಗುವ ಮುನ್ನ ಸಮಸ್ಯೆ ಬಗೆಹರಿಸುವಂತೆ ಐ ಆರ್ ಬಿ ಅಧಿಕಾರಿಗಳಿಗೆ ಶಾಸಕರು ತಾಕೀತು ಮಾಡಿದರು.
ಒಟ್ಟಿನಲ್ಲಿ ಕಳೆದ ಮಳೆಗಾಲದಲ್ಲಿ ಉದ್ಬವಿಸಿದ ಸಮಸ್ಯೆ ಈ ಬಾರಿ ಉದ್ಬವಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.