
ಭಟ್ಕಳ: ಮಳೆಗಾಲ ಆರಂಭವಾದ ಬಳಿಕ ಐ. ಆರ್.ಬಿ ಕಂಪನಿ ನಡೆಸುವ ರಾಷ್ಟೀಯ ಹೆದ್ದಾರಿ ಕಾಮಗಾರಿಯಿಂದ ಉದ್ಬವಿಸಬಹುದಾದ ಸಮಸ್ಯೆಗಳನ್ನು ಈಗಲೇ ಬಗೆಹರಿಸುವಂತೆ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಯ್ಕ ಅಧಿಕಾರಿಗಳಿಗೆ ಮತ್ತು ಕಂಪನಿಯವರಿಗೆ ಈ ಹಿಂದಿನ ಸಭೆಯಲ್ಲಿ ಸೂಚಿಸಿದ್ದರು. ಇನ್ನು ಒಂದು ತಿಂಗಳೊಳಗೆ ಮಳೆಗಾಲ ಆರಂಭವಾಗುವದರಿoದ ಗುರುವಾರ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಅವೈಜ್ಞಾನಿಕವಾಗಿ ಈ ಹಿಂದೆ ನಡೆದ ಕಾಮಗಾರಿಯಿಂದ ಕಳೆದ ಮಳೆಗಾಲದಲ್ಲಿ ಶಿರಾಲಿಯ ಜನತಾ ವಿದ್ಯಾಲಯದ ಸುತ್ತ ಮುತ್ತ ಸಂಪೂರ್ಣ ರಸ್ತೆ, ಹಿತ್ತಲುಗಳು ಜಲಾವೃತಗೊಂಡು ಅಪಾರ ಹಾನಿ ಸಂಭವಿಸಿದ್ದಲ್ಲದೆ ಜನರು ಸಂಕಷ್ಟಕ್ಕೀಡಾಗಿದ್ದರು. ಆದರೆ ಈ ಬಾರಿ ಈ ಸಮಸ್ಯೆ ಮತ್ತೆ ಸಂಭವಿಸಬಾರದು. ಅಲ್ಲದೇ ಈ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಐ ಆರ್ ಬಿ ಅಭಿಯಂತರರನ್ನು ಹಾಗೂ ಭಟ್ಕಳ ಸಹಾಯಕ ಆಯುಕ್ತರನ್ನು ಮತ್ತು ತಹಶೀಲ್ದಾರರನ್ನು ಸ್ಥಳಕ್ಕೆ ಕರೆಯಿಸಿ ಊರಿನ ನಾಗರಿಕರ ಸಮ್ಮುಖದಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಯಾವ ರೀತಿ ಮಾಡಬಹುದು ಎಂದು ಚರ್ಚಿಸಲಾಯಿತು. ಈ ಬಗ್ಗೆ ಅಂತಿಮವಾಗಿ ಯಾವ ರೀತಿಯಾಗಿ ಕಾಮಗಾರಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿ ಕೊಡಲಾಗಿತು. ಅದರಂತೆ ಸಮಸ್ಯೆ ಆಗುವ ಜಾಗಗಳನ್ನು ಅಧಿಕಾರಿಗಳಿಗೆ ತೋರಿಸಿ, ಮಳೆಗಾಲ ಪ್ರಾರಂಭವಾಗುವ ಮುನ್ನ ಸಮಸ್ಯೆ ಬಗೆಹರಿಸುವಂತೆ ಐ ಆರ್ ಬಿ ಅಧಿಕಾರಿಗಳಿಗೆ ಶಾಸಕರು ತಾಕೀತು ಮಾಡಿದರು.
ಒಟ್ಟಿನಲ್ಲಿ ಕಳೆದ ಮಳೆಗಾಲದಲ್ಲಿ ಉದ್ಬವಿಸಿದ ಸಮಸ್ಯೆ ಈ ಬಾರಿ ಉದ್ಬವಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ