
ಬೆಂಗಳೂರು: ಕೊರೊನಾ ವೈರಸ್ ಸೋಂಕಿಗೆ ರಾಜ್ಯದ ವಿವಿಧೆಡೆ ಮೇ ೧೭ರ ಸಂಜೆ ೫ರಿಂದ ಮೇ ೧೮ರ ಮಧ್ಯಾಹ್ನ ೧೨ರವರೆಗೆ ಒಟ್ಟು ೮೪ ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ೧,೨೩೧ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇದುವರೆಗೆ ೫೨೧ ಮಂದಿ ಸೋಂಕಿನಿAದ ಗುಣಮುಖರಾಗಿದ್ದು, ೩೭ ಜನರು ಮೃತಪಟ್ಟಿದ್ದಾರೆ. ಉಳಿದಂತೆ ೬೭೨ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಉತ್ತರ ಕನ್ನಡದಲ್ಲಿ ಇಂದು ೮ ಕೋರೊನಾ ಪಾಸಿಟಿವ್,
ಇಂದು ಧೃಢಪಟ್ಟ ಎಂಟು ಜನರಲ್ಲಿ ಏಳು ಜನ ಮುಂಬೈನಿAದ ವಾಪಾಸ್ ಜಿಲ್ಲೆಗೆ ಬಂದಿದ್ದು, ಭಟ್ಕಳ ಮೂಲದ ಎರಡು ವರ್ಷದ ಬಾಲಕಿಗೆ ಈಗಾಗಲೇ ಸೋಂಕು ತಗುಲಿರುವವರ ಸಂಪರ್ಕದಿoದ ಸೋಂಕು ತಗುಲಿದೆ.
ಹೊನ್ನಾವರದ ನಾಲ್ವರು ಸೋಂಕಿತರು ಒಂದೇ ಕುಟುಂಬದವರಾಗಿದ್ದು ಎಲ್ಲರು ಮುಂಬೈನಿoದ ಬಂದ ನಂತರ ಪಟ್ಟಣದ ಪ್ರಭಾತ್ ನಗರದಲ್ಲಿ ಇರುವ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದರು.
ಇನ್ನು ಮುಂಬೈ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮುಂಡಗೋಡ ತಾಲೂಕಿನ ಇಬ್ಬರಿಗೆ ಸೋಂಕು ದೃಡಪಟ್ಟಿದ್ದು ಸೋಂಕಿತರ ಎರಡು ಗ್ರಾಮದಲ್ಲಿ ಜನರ ಓಡಾಟವನ್ನ ನಿರ್ಭಂದಿಸಲಾಗಿದೆ.
ಇದಲ್ಲದೇ ಮುಂಬೈನಿoದ ವಾಪಾಸ್ ಬಂದು ಮುರ್ಡೇಶ್ವರದ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ತಗಲಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಅರ್ಧ ಶತಕ ದಾಟಿದೆ. ಸದ್ಯ ೪೦ ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿ ಇದ್ದು, ಒಟ್ಟು ಸೋಂಕಿತರ ಸಂಖ್ಯೆ ೫೧ ಆಗಿದೆ. ೧೧ ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಓರ್ವ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ೩೦ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಆಯಾ ತಾಲೂಕು ಆಸ್ಪತ್ರೆಯಲ್ಲೇ ಇದ್ದಾರೆ.
ಭಟ್ಕಳ ಪಟ್ಟಣವೊಂದರಲ್ಲೇ ಒಟ್ಟು ೪೪ ಸೋಂಕಿತರು ಇದ್ದು, ೩೩ ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ೧೧ ಮಂದಿ ಗುಣಮುಖರಾದವರಾಗಿದ್ದಾರೆ.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು