
ಕಾರವಾರ: ಜಿಲ್ಲೆಗೆ ಹೊರರಾಜ್ಯದಿಂದ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲ್ಲೆ ಇದ್ದು ಈಗಾಗಲೇ ಹಲವರು ಸರ್ಕಾರಿ ಕ್ವಾರಂಟೈನನಲ್ಲಿ ಇದ್ದಾರೆ. ೬೭೦೭ ಮಂದಿ ಅರ್ಜಿಯನ್ನು ಸೇವಾಸಿಂಧುವಿನಲ್ಲಿ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ ಮಾಹಿತಿ ನೀಡಿದ್ದಾರೆ.
ಅರ್ಜಿ ಸಲ್ಲಿಸಿದ್ದವರ ಪೈಕಿ ೬೪೩೫ ಮಂದಿಗೆ ಜಿಲ್ಲೆಗೆ ಬರಲು ಅನುಮತಿ ನೀಡಲಾಗಿದೆ. ೪೦ ಅರ್ಜಿಯನ್ನು ತಿರಸ್ಕರಿಸಲಾಗಿದ್ದು, ೨೩೨ ಅರ್ಜಿಗಲೂ ಸೇವಾಸಿಂಧುವಿನಲ್ಲಿ ಬಾಕಿ ಇದೆ. ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಸ್ವಂತ ವಾಹನ ಅಥವಾ ಖಾಸಗಿ ವಾಹನದಲ್ಲಿ ಬರಲು ಇಚ್ಚಿಸಿದ್ದವರಿಗೆ ಅನುಮತಿ ನೀಡಿ ಅವಕಾಶ ನೀಡಲಾಗಿದೆ. ಹೀಗಾಗಿ ಹಲವರು ಈಗಾಗಲೇ ಜಿಲ್ಲೆಗೆ ಬಂದಿದ್ದಾರೆ. ಸರ್ಕಾರಿ ವಾಹನದ ಅವಕಾಶ ಕೇಳಿದವರು, ಈವರೆಗೆ ಜಿಲ್ಲೆಗೆ ಬರಲು ಸಾಧ್ಯವಾಗಿಲ್ಲ. ಸೊಂಕಿತ ನಾಲ್ಕು ರಾಜ್ಯ ಹೊರತುಪಡಿಸಿ ಉಳಿದವರಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದು ಮಾಧ್ಯಮಗೊಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.