April 26, 2024

Bhavana Tv

Its Your Channel

ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕಿ ರೂಪಾಲಿ ನಾಯ್ಕ

ಕಾರವಾರ: ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕರವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ತಾಲ್ಲೂಕಿನ ಗಾಡಸಾಯಿ ಹೋಬಳಿಯ ನಾಡಕಚೇರಿ ಕಟ್ಟಡವನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕರು ಸಾರ್ವಜನಿಕರಿಗೆ ನಾಡ ಕಚೇರಿಯಿಂದ ಸಿಗಬೇಕಾದ ಸೌಲಭ್ಯಗಳು ತ್ವರಿತವಾಗಿ ತಲುಪಬೇಕು ಎನ್ನುವ ಉದ್ದೇಶದಿಂದ ಕಡಿಮೆ ಅವಧಿಯಲ್ಲಿ ಈ ಕಟ್ಟಡವನ್ನು ಅಚ್ಚುಕಟ್ಟಾಗಿ ನೆರವೇರಿಸಿದ್ದಕ್ಕೆ ಅಧಿಕಾರಿಗಳಿಗೆ ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ಇದೇ ರೀತಿ ಎಲ್ಲಾ ಕಾರ್ಯಗಳು ಸರಿಯಾದ ಸಮಯದಲ್ಲಿ ನಡೆದರೆ ಸಾರ್ವಜನಿಕರಿಗೆ ಕಚೇರಿ ಕೆಲಸಗಳಲ್ಲಿ ಯಾವುದೇ ವಿಳಂಬವಾಗುವುದಿಲ್ಲ. ನಾಡ ಕಚೇರಿಯಲ್ಲಿ ಸಾರ್ವಜನಿಕರಿಗೆ ಇರುವ ಸೌಲಭ್ಯಗಳು ಸರಿಯಾಗಿ ನಡೆಯಬೇಕು. ಇಷ್ಟು ದಿನಗಳ ಕಾಲ ಬಾಡಿಗೆ ಕಟ್ಟಡದಲ್ಲಿ ಇದ್ದ ಕಚೇರಿಯು ಈಗ ಸ್ವಂತ ಕಟ್ಟಡಕ್ಕೆ ವರ್ಗಾಯಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ. ತಮ್ಮ ಊರಿನಲ್ಲಿಯೇ ಇರುವ ಈ ಕಚೇರಿಯನ್ನು ತಮ್ಮ ಮನೆಯಂತೆ ನೋಡಿಕೊಳ್ಳಬೇಕು. ನಾಡ ಕಚೇರಿಗೆ ಬರುವ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು
ಈ ಸಂದರ್ಭದಲ್ಲಿ ತಹಶಿಲ್ದಾರರು ಸೇರಿದಂತೆವಿವಿಧ ಅಧಿಕಾರಿವರ್ಗದವರು ಹಾಗೂ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.

error: