ಕುಮಟಾ : ಬಿಇಓ ಕಾರ್ಯಾಲಯದಲ್ಲಿ ಸೋಮವಾರ ಗುರುಸ್ಪಂದನ ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ ಶಿಕ್ಷಕರ, ಸಿಬ್ಬಂದಿಗಳ ಸೇವಾ ಪುಸ್ತಕದ ಅನಾವರಣಗೊಳಿಸಿದರು. ಬಿಇಓ ಕಾರ್ಯಾಲಯದ ಆವಾರದಲ್ಲಿ ತೆಂಗಿನ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು. ತಾಲೂಕಿನ ೭೪೪ ಪ್ರಾಥಮಿಕ ಶಾಲೆ ಶಿಕ್ಷಕರು, ೮೩ ಪ್ರೌಢಶಾಲೆ ಶಿಕ್ಷಕರು ಹಾಗೂ ನೂರಕ್ಕೂ ಹೆಚ್ಚು ಅನುದಾನಿತ ಶಾಲೆ ಶಿಕ್ಷಕರಿದ್ದು ಇವರೆಲ್ಲರೂ ಸೇರಿ ಕಲ್ಪವೃಕ್ಷ ಅಭಿಯಾನದಲ್ಲಿ ಸಾವಿರಾರು ಸಸಿ ಬೆಳೆಸಲಿದ್ದಾರೆ. ಡಿಡಿಪಿಐ ಹರೀಶ ಗಾಂವಕರ ಅಧ್ಯಕ್ಷತೆ ವಹಿಸಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.