
ಕಾರವಾರ: ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು, ಮಳೆಗಾಲದ ಅವದಿಯಲ್ಲಿ ಮೀನು ಮತ್ತು ಇತರೆ ಜಲಚರಗಳು ಮೊಟ್ಟೆ ಇಡುವ ಹಾಗೂ ಸಂತಾನೋತ್ಪತ್ತಿ ಮಾಡುವ ಹಿನ್ನಲೆಯಲ್ಲಿ ಜೂನ 8 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೂ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ನದಿಪಾತ್ರಗಳಲ್ಲಿ ಮರಳು ತೆಗೆಯುವಿಕೆ ಮತ್ತು ಸಾಗಾಣಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಬೆಂಗಳೂರು ಇವರು 2020 ಮಾರ್ಚ ತಿಂಗಳಲ್ಲಿ ನೀಡಿರುವ ಕರಾವಳಿ ನಿಯಂತ್ರಣ ವಲಯ ನಿರಾಕ್ಷೇಪಣಾ ಪತ್ರದಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ನದಿಪಾತ್ರಗಳಲ್ಲಿನ ಮರಳು ದಿಬ್ಬಗಳಿಂದ ಮರಳು ತೆಗೆಯುವಿಕೆ/ಸಾಗಾಣಿಕೆ ಮಾಡಲು ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ತಾತ್ಕಾಲಿಕ ಮರಳು ಪರವಾನಿಗೆ ನೀಡಲಾಗಿದ್ದನ್ನು ಸ್ಥಗಿತಗೊಳಿಸಲಾಗಿದೆ. ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.