May 14, 2024

Bhavana Tv

Its Your Channel

ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಸದಸ್ಯನೊರ್ವ ಪ್ರಾಣಾಪಾಯದಿಂದ ಪಾರಾದ ಘಟನೆ ಭಾನುವಾರ ಬೆಳಗ್ಗಿನ ಜಾವ ಭಟ್ಕಳದಲ್ಲಿ ನಡೆದಿದೆ.

ಭಟ್ಕಳ: ತಾಲ್ಲೂಕಿನ ಮುಖ್ಯರಸ್ತೆಯಲ್ಲಿನ ಐಷಾ ಪ್ಲಾಜಾ ಎದುರಿನ ಕಟ್ಟಡದಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಸದಸ್ಯನೊರ್ವ ಪ್ರಾಣಾಪಾಯದಿಂದ ಪಾರಾದ ಘಟನೆ ಭಾನುವಾರ ಬೆಳಗ್ಗಿನ ಜಾವ ನಡೆದಿದೆ.

ಮಹ್ಮದ್ ನೂಹ್ ರುಕ್ನುದ್ದೀನ್ ಎನ್ನುವವರಿಗೆ ಸೇರಿದ ಕಟ್ಟಡ ಇದಾಗಿದೆ. ಇವರು ಇದರಲ್ಲಿನ ಒಂದು ಮನೆಯಲ್ಲಿ ವಾಸಿಸುತ್ತಿದ್ದರು. ಭಾನುವಾರ ಬೆಳಿಗ್ಗೆ ಇವರು ವಾಸಿಸುತ್ತಿದ್ದ ಮನೆಗೆ ಬೆಂಕಿ ತಗುಲಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶ್ಯಾಮಕ ದಳ ಆಗಮಿಸಿ ಸಾರ್ವಜನಿಕರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅದೃಷ್ಟವಶಾತ ಮನೆಯಲ್ಲಿ ಇವರೊರ್ವರೆ ಇದ್ದುದ್ದರಿಂದ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮನೆಯಲ್ಲಿರುವ ಲಕ್ಷಾಂತರ ರೂ ಮೌಲ್ಯದ ಫರ್ನಿಚರ್, ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ ಬರ, ಆಭರಣ, ನಗದು ಸೇರಿ ಇತರೆ ವಸ್ತುಗಳು ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ. ಹಾನಿಯಾಗಿದೆ ಎನ್ನಲಾಗಿದೆ. ಇವರು ಮದುವೆ ಸೇರಿ ಇತರ ಶುಭ ಸಮಾರಂಭಗಳಿಗೆ ಡೇಕೋರೆಟರ್ ಆಗಿ ಕೆಲಸ ಮಾಡುತ್ತಿದ್ದರು. ಲಾಕ್‌ಡೌನನಿಂದ ಲಕ್ಷಾಂತರ ರೂ ನಷ್ಟ ಅನುಭವಿಸಿದ್ದು ಈಗ ಮನೆಗೆ ಬೆಂಕಿ ತಗುಲಿ ಮತ್ತಷ್ಟು ಹಾನಿ ಅನುಭವಿಸುವಂತಾಗಿದೆ. ಸ್ಥಳಕ್ಕೆ ಗ್ರಾಮಲೆಕ್ಕಾಧಿಕಾರಿ ಶಂಭು ಕೆ, ಹೆಸ್ಕಾಂನ ಅಧಿಕಾರಿಗಳು ಬೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

error: