ಗೋಕರ್ಣ: ಕಡಲತೀರದಲ್ಲಿ ವಿದೇಶಿ ಪ್ರಜೆಯ ಶವ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ. ಮಂಗಳವಾರ ಸಂಜೆ ಸಮುದ್ರದಲ್ಲಿ ಈಜಾಡಲು ತೆರಳಿದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರಬೇಕು ಎಂದು ಊಹಿಸಲಾಗಿದೆ.
ಯಾವ ದೇಶದ ಪ್ರಜೆ, ಎಷ್ಟು ದಿನದಿಂದ ಗೋಕರ್ಣದಲ್ಲಿದ್ದರು ಎಂಬಿತ್ಯಾದಿ ವಿವರಗಳು ತಿಳಿದು ಬರಬೇಕಾಗಿದೆ. ಪ್ರವಾಸಿ ನಿಜವಾಗಿಯೂ ಸಮುದ್ರದಲ್ಲಿ ಮುಳುಗಿ ಮೃತಪಟ್ಟರೋ ಅಥವಾ ಲಾಕ್ಡೌನ್ ಪರಿಣಾಮದಿಂದ ತಮ್ಮ ದೇಶಕ್ಕೆ ತಿರುಗಿ ಹೋಗಲು ಸಾಧ್ಯವಾಗದೇ ಕೈಯಲ್ಲಿದ್ದ ಹಣ ಖರ್ಚಾಗಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆಯೋ ಎಂಬ ಬಗ್ಗೆಯೂ ತಿಳಿಯದಾಗಿದೆ.ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮೃತರು ವಿದೇಶಿ ಪ್ರಜೆಯಾದ ಕಾರಣ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.
source: ಪ್ರಜಾವಾಣಿ
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.