May 15, 2024

Bhavana Tv

Its Your Channel

ಮಂಗಳೂರಿನಲ್ಲಿ ಒಂದೇ ದಿನ ಇಬ್ಬರು ಕೊರೋನಾ ಸೋಂಕಿಗೆ ಬಲಿ….

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೊರೋನಾಗೆ ಇಂದು ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಭಟ್ಕಳ ಮೂಲದ ವರನಿಗೆ ಕೋವಿಡ್- ೧೯ ಸೋಂಕು ದೃಢಪಟ್ಟಿದೆ. ಅನಾರೋಗ್ಯದ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ, ಈತನ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಿಳಿಸಿದ್ದಾರೆ.
ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಈತ ವಾರದ ಹಿಂದೆ ಭಟ್ಕಳಕ್ಕೆ ಬಂದಿದ್ದ. ಮದುವೆಯ ಕಾರಣಕ್ಕೆ ನಾಲ್ಕೈದು ದಿನ ಭಟ್ಕಳದಲ್ಲಿದ್ದು, ಮದುವೆಯ ಬಳಿಕ ಮಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ.
ಈತನ ಸಂಪರ್ಕಕ್ಕೆ ಬಂದ ಹಲವರಿಗೆ ಸೋಂಕು ದೃಢಪಟ್ಟಿದೆ.

ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ೭೮ ವರ್ಷದ ವೃದ್ಧ ಸಾವನ್ನಪ್ಪಿದ್ದಾನೆ.ಕೊರೋನಾ ಪಾಸಿಟಿವ್ ಆಗಿದ್ದ ಮಂಗಳೂರಿನ ಬೆಂಗ್ರೆ ನಿವಾಸಿ ಬಲಿಯಾಗಿದ್ದಾರೆ.

ಡಯಾಬಿಟಿಸ್ ಮತ್ತು ನ್ಯುಮೋನಿಯಾ ರೋಗದಿಂದ ವ್ಯಕ್ತಿ ಬಳಲುತ್ತಿದ್ದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ೧೬ ಜನ ಕೊರೋನಾ ಸೋಂಕಿನಲ್ಲಿ ಸಾವನ್ನಪ್ಪಿದ್ದಾರೆ

error: