ಕಾರವಾರ: ಕಾರವಾರದಲ್ಲಿ ಐವರಿಗೆ ಸೋಂಕು ತಗುಲಿದ್ದು, 25 ವರ್ಷದ ಯುವತಿ ಕಾರವಾರದ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಯಾಗಿದ್ದಾರೆ. ಇನ್ನೋರ್ವ ಸೋಂಕಿತನ ಸಂಪರ್ಕಕ್ಕೆ ಬಂದ ಕಾರಣ ಹಾಗೂ ಮತ್ತೋರ್ವ ಬೆಂಗಳೂರಿನಿಂದ ವಾಪಸ್ಸಾಗಿದ್ದವನಿಗೆ ಸೋಂಕು ದೃಢಪಟ್ಟಿದೆ. ಇನ್ನುಳಿದ ಇಬ್ಬರ ಸೋಂಕಿನ ಮೂಲ ಪತ್ತೆಯಾಗಿಲ್ಲ.
ಮಂಗಳೂರಿನಲ್ಲಿ ದಾಖಲಾಗಿರುವ ಓರ್ವ ಭಟ್ಕಳಿಗನಿಗೆ ಸೋಂಕು ದೃಢಪಟ್ಟಿದೆ. ಇನ್ನೋರ್ವ ಬೆಂಗಳೂರಿನಿಂದ ಭಟ್ಕಳಕ್ಕೆ ವಾಪಸ್ಸಾದವನಿಗೆ ಸೋಂಕು ತಗುಲಿದರೆ, 17 ವರ್ಷದ ಬಾಲಕನೊಬ್ಬನಿಗೆ ಸೋಂಕು ದೃಢಪಟ್ಟಿದೆ. ಆದರೆ, ಈತನ ಸೋಂಕಿನ ಮೂಲ ಪತ್ತೆಯಾಗಿಲ್ಲ.
ಸಿದ್ದಾಪುರ ತಾಲೂಕು ಆಸ್ಪತ್ರೆಯಲ್ಲಿ ಓರ್ವ ಸಿಬ್ಬಂದಿಗೆ ಹಾಗೂ ಇನ್ನೋರ್ವ ರೋಗಿಗೆ, ದಾಂಡೇಲಿಯಲ್ಲಿ ವೃದ್ಧನಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿದೆ. ಹಳಿಯಾಳದ ಓರ್ವನಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿನ ಮೂಲ ಪತ್ತೆಯಾಗಿಲ್ಲ. ಕುಮಟಾದ ವ್ಯಕ್ತಿಯೊಬ್ಬರು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೂ ಸೋಂಕು ದೃಢಪಟ್ಟಿದೆ
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.