ಹೊನ್ನಾವರ; ತಾಲೂಕಿನ ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ಪತ್ತೆಯಾಗುತ್ತಿರುವ ಬೆನ್ನಲ್ಲೆ ಕಳೆದ ವಾರದಿಂದ ಜಾರಿಗೆ ಬಂದ ಮಧ್ಯಾಹ್ನ ನಂತರದ ಲಾಕ್ ಡೌನ್ ಮುಂದಿನ ಸೋಮವಾರದಿಂದ ಶನಿವಾರದವರೆಗೆ ಮುಂದುವರೆಸುವುದಾಗಿ ಶಾಸಕ ದಿನಕರ ಶೆಟ್ಟಿ ಸಾರ್ವಜನಿಕರ ಅಭಿಪ್ರಾಯದ ಮೇರೆಗೆ ನಿರ್ಣಯ ಕೈಗೊಂಡರು.
ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆದ ಸಾರ್ವಜನಿಕರು, ಹಾಗೂ ಅಂಗಡಿ ಮಾಲೀಕರ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಅಂತಿಮವಾಗಿ ಒಂದು ವಾರಗಳ ಕಾಲ ಮತ್ತೆ ಮುಂದುವರೆಸಲು ತಿರ್ಮಾನಿಸಲಾಗಿದೆ ಎಂದು ಘೋಷಿಸಿದರು. ಅಲ್ಲದೇ ತಾಲೂಕಿಗೆ ಹೊರ ಜಿಲ್ಲೆಯಿಂದ ಬರುವವರ ಮೇಲೆ ನಿಗಾ ಇಡುವಂತೆ ತಿರ್ಮಾನಿಸಲಾಯಿತು.ಕೊರೋನಾ ನಿಯತ್ರಂಣಕ್ಕಾಗಿ ಎಲ್ಲ ಸಾರ್ವಜನಿಕರು ಈ ನಿರ್ಧಾರಕ್ಕೆ ಸಹಕರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಘವ ಬಾಳೇರಿ, ಹುಸೇನ್ ಖಾದ್ರಿ, ಉಮೇಶ ಮೇಸ್ತ, ವಿಜಯಾ ಆರುವರೆ, ಸಿಪಿಐ ವಸಂತ ಆಚಾರಿ, ಪಿಎಸೈ ಶಶಿಕುಮಾರ ಮತ್ತು ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಪ್ರಮುಖರು ಅಂಗಡಿ ಮಾಲೀಕರು, ಸಾರ್ವಜನಿಕರು ಉಪಸ್ಥಿತರಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.