ಭಟ್ಕಳ: ಕಳೆದ ಜುಲೈ 11ರಂದು ಓಮಾನ್ನಿಂದ ಮಂಗಳೂರಿಗೆ ಬಂದು ಮಂಗಳೂರಿನಲ್ಲಿಯೇ 7 ದಿನಗಳ ಕ್ವಾರಂಟೈನ್ ಅವಧಿಯನ್ನು ಮುಗಿಸಿದ್ದ ಒಟ್ಟೂ 60 ಜನರು ಎರಡು ಬಸ್ಸುಗಳಲ್ಲಿ ಶನಿವಾರ ಬೆಳಿಗ್ಗೆ ಭಟ್ಕಳಕ್ಕೆ ಬಂದಿದ್ದು ಅವರೆಲ್ಲರನ್ನು ಕೂಡಾ ಇಲ್ಲಿನ ಅಂಜುಮಾನ್ ಹಾಸ್ಟೇಲ್ನಲ್ಲಿ ಕ್ವಾರಂಟೈನ್ನಲ್ಲಿ ಇಡಲಾಗಿದೆ.
ಈಗಾಗಲೇ ಮಂಗಳೂರಿನಲ್ಲಿ ಒಂದು ವಾರ ಇದ್ದ ಅವರ ಗಂಟಲದ್ರವ ಪರೀಕ್ಷೆ ಮಾಡದೇ ಇರುವ ಕಾರಣ ಉತ್ತರ ಕನ್ನಡ ಜಿಲ್ಲಾಡಳಿತ ಅವರ ಗಂಟಲ ದ್ರವ ಪರೀಕ್ಷೆ ಮಾಡಿ ಅವರ ವರದಿ ಬಂದ ನಂತರ ಮುಂದಿನ ನಿರ್ಧಾರ ಕೈಗೊಳ್ಳಬೇಕಾಗಿದೆ. ಅಲ್ಲಿಯ ತನಕ ಅವರು ಕ್ವಾರಂಟೈನ್ನಲ್ಲಿರುವುದು ಅನಿವಾರ್ಯವಾಗಿದೆ ಎಂದು ಹೇಳಲಾಗುತ್ತಿದೆ
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.