ಭಟ್ಕಳ: ಲಾಕ್ಡೌನ್ ನಿಯಮಗಳ ಸಡಿಲಿಕೆಯ ನಂತರ ಸಲೂನ್ ತೆರೆಯಲು ಸರ್ಕಾರ ಅನುಮತಿ ನೀಡಿತು. ಆದರೆ ಭಯದಿಂದಾಗಿ ಕ್ಷೌರದಂಗಡಿಗಳಿಗೆ ಹೋಗಲು ಜನರು ಹಿಂದೇಟು ಹಾಕುತ್ತಿದ್ದರು.ಹೀಗಾಗಿ ಮುರ್ಡೇಶ್ವರದ ಕಲ್ಕತ್ತಾ ಹೆರ್ ಸಲೂನ್ ನಲ್ಲಿ ಪಿಪಿಇ ಕಿಟ್ ಬಳಸಿ ಕ್ಷೌರ ಮಾಡಲಾಗುತ್ತಿರುವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ಡೌನ್ ಅವಧಿಯಲ್ಲಿ ಎಲ್ಲಾ ಸಲೂನ್ ಗಳನ್ನು ಮುಚ್ಚಲಾಗಿತ್ತು. ಲಾಕ್ಡೌನ್ ನಿಯಮಗಳ ಸಡಿಲಿಕೆಯ ನಂತರ ಸಲೂನ್ ತೆರೆಯಲು ಸರ್ಕಾರ ಅನುಮತಿ ನೀಡಿತು. ಆದರೆ ಭಯದಿಂದಾಗಿ ಕ್ಷೌರದಂಗಡಿಗಳಿಗೆ ಹೋಗಲು ಜನರು ಹಿಂದೇಟು ಹಾಕುತ್ತಿದ್ದಾರೆ.
ಹೀಗಾಗಿ ಮುರ್ಡೇಶ್ವರದ ಕಲ್ಕತ್ತಾ ಹೆರ್ ಸಲೂನ್ ನಲ್ಲಿ ಪಿಪಿಇ ಕಿಟ್ ಬಳಸಿ ಕ್ಷೌರ ಮಾಡಲಾಗುತ್ತಿರುವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಲೂನ್ ಗಳಲ್ಲಿ ಅಂತರ ಕಾಪಾಡಿಕೊಳ್ಳಲು ಸಾಧ್ಯವಾಗದ ಕಾರಣ ಸೋಂಕು ಹರಡುವ ಸಾಧ್ಯತೆ ಹೆಚ್ಚು. ಇದಕ್ಕಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದೂ ಅವಶ್ಯವಾಗಿದೆ. ಹೀಗಾಗಿ ಈ ಸಲೂನ್ ನಲ್ಲಿ ಪಿಪಿಇ ಕಿಟ್ ಬಳಸಿ ಕ್ಷೌರ ಮಾಡಲಾಗುತ್ತಿದೆ.
ಗ್ರಾಹಕರು ಕುಳಿತುಕೊಳ್ಳುವ ಸ್ಥಳ ಹಾಗೂ ಬಳಸುವ ವಸ್ತುಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದ್ದು, ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸಲಾಗಿದೆ.
ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಈ ಸಂದರ್ಭದಲ್ಲಿ ಮುರ್ಡೇಶ್ವರದ ಈ ಸಲೂನ್ ಮಾಲೀಕ ತೆಗೆದುಕೊಂಡಿರುವ ನಿರ್ಧಾರಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವರದಿ :-ಶೈಲೇಶ್ ವೈದ್ಯ ಮುರ್ಡೇಶ್ವರ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.