ಮುಂಡಗೋಡ: ತಾಲೂಕಿನ ಪಾಳಾ ಹೊಬಳಿಯ ಇಂಗಳಕಿ ಹಾಗೂ ಕಲಕೊಪ್ಪ ಗ್ರಾಮಗಳ ವ್ಯಾಪ್ತಿಯ ರೈತರ ನಾಟಿ ಭತ್ತದ ಬೆಳೆಗೆ ಬೆಂಕಿ ರೋಗ ಮತ್ತು ಬೇರು ಕೊಳೆ ರೋಗ ಕಂಡು ಬಂದಿರುತ್ತಿದೆ.
ಬೆಂಕಿ ರೋಗ ನಿಯಂತ್ರಣಕ್ಕಾಗಿ 1ಗ್ರಾಂ. ಟ್ರೈಸೈಕ್ಲೋಜೋಲ್(ಬೀಮ್ ಪೌಡರ್)ನ್ನು 1ಲೀಟರ್ ನೀರಿಗೆ ಬೆರೆಸಿ ಸಿಂಪರಿಸಬೇಕು. ಬೇರು ಕೊಳೆ ರೋಗದ ನಿಯಂತ್ರಣಕ್ಕಾಗಿ ಪ್ರೊಪಿಕೊನಾಜೋಲ್ 1ಮಿ.ಲೀ. ಅನ್ನು 1ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡಬೇಕು. 4 ದಿನಗಳ ನಂತರ 2ಗ್ರಾಂ. ಮಂಗಳ ಬಯೋ-20 ಸಸ್ಯ ವರ್ಧಕವನ್ನು 1ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಎಂ.ಎಸ್. ಕುಲಕರ್ಣಿ ರೈತರಿಗೆ ಸಲಹೆ ನೀಡಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.