May 19, 2024

Bhavana Tv

Its Your Channel

ವೈದ್ಯರ ನಿಷ್ಕಾಳಜಿಯಿಂದ ವ್ಯಕ್ತಿಯೊರ್ವ ಮೃತ, ಸಂಬಂಧಿಕರಿಂದ ಆರೋಪ

ಭಟ್ಕಳ: ವೈದ್ಯರ ನಿಷ್ಕಾಳಜಿಯಿಂದ ವ್ಯಕ್ತಿಯೊರ್ವ ಮೃತಪಟ್ಟಿದ್ದಾನೆ ಎಂದು ಮೃತರ ಸಂಬಂಧಿಕರು, ಸ್ಥಳೀಯರು ಭಟ್ಕಳ ತಾಲೂಕಾಸ್ಪತ್ರೆ ಬಳಿ ಬಂದು ಆರೋಪ ಮಾಡಿದ್ದಾರೆ.
ಮೂಲತಃ ರಾಜಸ್ಥಾನದ ಪ್ರಸ್ತುತ ಮುರ್ಡೇಶ್ವರದಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಉಕ್ಮಾರಾಮ್ ಬೋರಾನ್ (65) ಮೃತ ವ್ಯಕ್ತಿ. ಇವರು ಪತ್ನಿ ಮತ್ತು ಒರ್ವ ಪುತ್ರನನ್ನು ಅಗಲಿದ್ದಾರೆ. ಇವರು ಕಳೆದ 35 ವರ್ಷಗಳಿಂದ ಮುರ್ಡೇಶ್ವರದಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದರು. ಇವರು ಸೋಮವಾರ ಮುಂಜಾನೆ ಎದೆನೋವಿನಿಂದ ಅಸ್ವಸ್ಥಗೊಂಡ ಖಾಸಗಿ ಕ್ಲಿನಿಕ್‍ಗೆ ತೆರಳಿದ್ದರು. ಅಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮರಳುವಾಗ ಮೂರ್ಚೆ ಹೋಗಿದ್ದಾರೆ. ನಂತರ ಕೂಡಲೆ ಅಲ್ಲಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಅಲ್ಲಿನ ವೈದ್ಯ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಅಲ್ಲದೆ ದೇಹವನ್ನು ಇಲ್ಲಿಂದ ತೆಗೆದುಕೊಂಡು ಹೋಗಿ ಇಲ್ಲವಾದರೆ ಪೊಲೀಸ್ ಠಾಣೆಗೆ ದೂರು ನೀಡುವೆ ಎಂದು ಬೆದರಿಸಿದ್ದಾರೆ. ನಂತರ ಅವರು ಮುರ್ಡೇಶ್ವರದ ಖಾಸಾಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿಯೂ ಚಿಕಿತ್ಸೆ ದೊರಕದೆ ನಂತರ ಕ್ಲಿನಿಕ್ ವೈದ್ಯರು ಪರೀಶೀಲನೆ ನಡೆಸಿ, ರೋಗಿ ಉಸಿರಾಡುತ್ತಿದ್ದು ಕೂಡಲೆ ತಾಲೂಕಾಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆಸ್ಪತ್ರೆಗೆ ಬರುವಾಗ ಮಾರ್ಗ ಮದ್ಯದಲ್ಲಿ ರೋಗಿ ಮೃತಪಟ್ಟಿದ್ದಾರೆ.
ಇದರಿಂದ ಕುಟುಂಬದವರು, ಸ್ಥಳೀಯರು ಮುರ್ಡೇಶ್ವರ ಆಸ್ಪತ್ರೆಯ ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.್ತವರು ಪರೀಶೀಲನೆ ನಡೆಸಿ ಚಿಕಿತ್ಸೆ ನೀಡಿದ್ದರೆ ರೋಗಿ ಬದುಕುಳಿಯುತ್ತಿದ್ದರು. ಇದು ವೈದ್ಯೆಯ ನಿರ್ಲಕ್ಯದಿಂದ ಸಾವಾಗಿದೆ ಎಂದು ಆರೋಪಿಸಿದ್ದಾರೆ.

error: