May 17, 2024

Bhavana Tv

Its Your Channel

ಪತ್ರಕರ್ತರ ಬಗ್ಗೆ ಅವಹೇಳಕಾರಿ ಹೇಳಿಕೆ ಶಾಸಕ ದಿನಕರ ಶೆಟ್ಟಿ ವಿರುದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿoದ ಖಂಡನೆ.

ಶಿರಸಿ: ಕುಮಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ದಿನಕರ ಶೆಟ್ಟ ಜಿಲ್ಲೆಯ ಪತ್ರಕರ್ತರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದು ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸುತ್ತದೆ. ಚುನಾಹಿತ ಜನಪ್ರತಿನಿಧಿಯಾಗಿರುವ ಶಾಸಕರು ತಮ್ಮ ಸ್ಥಾನದ ಹಿರಿಮೆ ಮರೆತು ಜಿಲ್ಲೆಯ ವರದಿಗಾರರ ಕುರಿತು ಅಪಮಾನಕರ ರೀತಿಯಲ್ಲಿ ಮಾತನಾಡಿದ್ದಾರೆ. ಪತ್ರಕರ್ತರು ವ್ಯವಸ್ಥೆಯಲ್ಲಿಯ ತಮ್ಮ ಪರಿಧಿಯಲ್ಲಿ ಸಮಾಜ ಮತ್ತು ಆಡಳಿತ ವ್ಯವಸ್ಥೆ ಮಧ್ಯದ ಕೊಂಡಿಯಾಗಿ ಕ್ಷಿಪ್ರ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಹೇಳಿಕೆಗಳಿಂದ ವರದಿಗಾರರ ಆತ್ಮ ಗೌರವಕ್ಕೆ ಧಕ್ಕೆಯುಂಟಾಗುತ್ತದೆ. ಹಾಗೂ ಜನರಲ್ಲಿ ಇಂತಹ ಹೇಳಿಕೆಯಿಂದ ತಪ್ಪು ತಿಳುವಳಿಕೆಗೆ ಕಾರಣವಾಗುತ್ತದೆ. ಇದರಿಂದ ಜನರ ಮಧ್ಯೆ ಕಾರ್ಯನಿರ್ವಹಿಸುವಾಗ ಪ್ರಾಣಭೀತಿ ಎದುರಿಸಬೇಕಾಗುತ್ತದೆ. ಇಂತಹ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಪತ್ರಕರ್ತರ ಆತ್ಮ ಗೌರವಕ್ಕೆ ಧಕ್ಕೆ ಬರುವಂತಹ ಹೇಳಿಕೆಗೆ ಕಡಿವಾಣ ಹಾಕುವ ಜೊತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

error: