May 20, 2024

Bhavana Tv

Its Your Channel

ಶಾಸಕ ದಿನಕರ ಶೆಟ್ಟಿ ಹಾಗೂ ಸಂಸದ ಅನಂತಕುಮಾರ ಹೆಗಡೆಯವರು ಕೊರೊನಾ ಕಾಯಿಲೆಯಿಂದ ಬೇಗ ಗುಣಮುಖರಾಗಿ ಜನರ ಸೇವೆಗೆ ಮರಳಲಿ

ಕುಮಟಾ: ಶಾಸಕ ದಿನಕರ ಶೆಟ್ಟಿ ಹಾಗೂ ಸಂಸದ ಅನಂತಕುಮಾರ ಹೆಗಡೆಯವರು ಕೊರೊನಾ ಕಾಯಿಲೆಯಿಂದ ಬೇಗ ಗುಣಮುಖರಾಗಿ ಜನರ ಸೇವೆಗೆ ಮರಳಲಿ ಎಂದು ಪ್ರಾರ್ಥಿಸಿ, ತಾಲೂಕಿನ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಗ್ರಾಮ ದೇವತೆಯಾದ ಪಟ್ಟಣದ ದೇವರಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಿಯಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ ಮಾತನಾಡಿ, ಜನರ ನೆಚ್ಚಿನ ಶಾಸಕರು ಹಾಗೂ ಸಂಸದರಿಗೆ ಕೊವಿಡ್ ಕಾಯಿಲೆ ಬಂದಿರುವುದು ಬೇಸರದ ಸಂಗತಿ. ಅವರು ಶೀಘ್ರ ಗುಣಮುಖರಾಗಿ ಜನರ ಸೇವೆಗೆ ಲಭ್ಯವಾಗಲಿ ಹಾಗೂ ತಾಲೂಕಿನಲ್ಲಿ ಕೊರೊನಾ ಮಹಾಮಾರಿ ತೊಲಗಲಿ ಎಂದು ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಮಂಡಲದ ಪ್ರಮುಖರು ಪೂಜೆ ಸಲ್ಲಿಸಿದ್ದಾರೆ. ನಮ್ಮ ಪ್ರಾರ್ಥನೆ ಈಡೇರಲಿದೆ ಎಂಬ ನಂಬಿಕೆ ಇದೆ‌ ಎಂದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ಪ್ರಮುಖರಾದ ಜಯಾ ಶೇಟ್, ಸುಮತಿ ಭಟ್ಟ, ಪುರಸಭಾ ಸದಸ್ಯರಾದ ಪಲ್ಲವಿ ಮಡಿವಾಳ, ಶೈಲಾ ಗೌಡ, ಛಾಯಾ ವೆಂಗುರ್ಲೇಕರ, ಜಿಲ್ಲಾ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಯುವ ಮೋರ್ಚಾದ ತಾಲೂಕಾಧ್ಯಕ್ಷ ಜಗದೀಶ ಭಟ್ಟ, ಪರಿಶಿಷ್ಟ ಜಾತಿ ಮೋರ್ಚಾದ ತಾಲೂಕಾಧ್ಯಕ್ಷ ಮಂಜುನಾಥ ಮುಕ್ರಿ ಸೇರಿದಂತೆ ಮಂಡಲದ ಇತರರು ಇದ್ದರು

error: