May 18, 2024

Bhavana Tv

Its Your Channel

ಬೈಕ್ ಸವಾರನೊರ್ವನಿಗೆ ಜೆಸಿಬಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತ.

ಭಟ್ಕಳ:ಹೊನ್ನಾವರ ದಿಂದ ಭಟ್ಕಳದ ಕಡೆಗೆ ಬರುತ್ತಿದ್ದ ಬೈಕ್ ಸವಾರನೊರ್ವನಿಗೆ ಎದುರುರಿನಿಂದ ಬಂದ ಜೆಸಿಬಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದು ಸಹಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಭಟ್ಕಳ ತಾಲೂಕಿನ ಹನೀಪಪಾದ ಬಳಿಯಲ್ಲಿ ಮಂಗಳವಾರ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಂತೋಷ ಭೀರಪ್ಪ ಅಂಬಿಗ(೩೫) ಮೃತ ಮೀನುಗಾರ. ಇವರು ಮತ್ತು ಹಿಂಬದಿ ಸವಾರ ದಯಾನಂದ ಶಿವಪ್ಪ ಅಂಬಿಗ ಸಿದ್ಧಾಪುರದಿಂದ ಗಂಗೊಳ್ಳಿಗೆ ಮೀನುಗಾರಿಕೆ ಕೆಲಸಕ್ಕೆಂದು ತೆರಳಿದ್ದರು ಎನ್ನಲಾಗಿದೆ. ಇವರಿಗೆ ತಾಲೂಕಿನ ಹನೀಪಾಬಾದ ಬಳಿಯಲ್ಲಿ ಎದುರಿನಿಂದ ಬಂದ ಜೆಸಿಬಿ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಸವಾರ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಸಹ ಸವಾರರನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

error: