ಭಟ್ಕಳ: ಸರ್ಕಾರದ ಆದೇಶದಂತೆ. ದಿನಾಂಕ ೦೧-೦೧-೨೦೨೧ ರಿಂದ ಶಾಲೆಗಳು ಪ್ರಾರಂಭವಾಗಬೇಕೆನ್ನುವ ನಿಯಮದಂತೆ ಭಟ್ಕಳ ತಾಲೂಕಿನ ಕುಂಟವಾಣಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮದಿoದ ನಡೆಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ ಶಾಲಾ ವಾದ್ಯದೊಂದಿಗೆ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು. ಬಂದ ಮಕ್ಕಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಯಿತು. ಹಾಗೂ ಸ್ಯಾನಿಟೈಸೇಸನ್ ವ್ಯವಸ್ಥೆ ಮಾಡಲಾಗಿತ್ತು.ಶಾಲೆಯ ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಅನಂತ ಶೆಟ್ಟಿ, ಸದಸ್ಯರಾದ ಮಂಜುನಾಥ ಶೆಟ್ಟಿರಾಮಯ್ಯ ಗೊಂಡ , ಪಾಲಕರಾದ ಬಡಿಯಾ ಗೊಂಡ, ಸುರೇಶ ಶೆಟ್ಟಿ ಶಿಕ್ಷಣ ಸಂಯೋಜಕರಾದ ಆರ್.ಎಸ್.ಗೊoಡರವರು ಉಪಸ್ಥಿತರಿದ್ದರು.ಶಾಲೆಯ ಪ್ರಭಾರ ಮುಖ್ಯಾಧ್ಯಾಪಕರಾದ ಡಾ||. ಸುರೇಶ ತಾಂಡೇಲ್ ರವರ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಆನಂದ ನಾಯ್ಕ, ಮಾರುತಿ ನಾಯ್ಕ, ಕುಮಾರ ನಾಯ್ಕ, ಸವಿತಾ ನಾಯ್ಕ, ಶಶಿಕಲಾ ನಾಯ್ಕ ವಿಮಲಾ ಮೋಗೇರ ರವರು ಶಾಲೆಯ ಶುಚಿತ್ವ ಹಾಗೂ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನದಲ್ಲಿ ಸಹಕರಿಸಿದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.