ಭಟ್ಕಳ:ತಾಲೂಕಿನ ಗುರುಕೃಪಾ ಸಹಕಾರಿ ಪತ್ತಿನ ಸಂಘದ ಆಡಳಿತ ಕಮೀಟಿಯ ಅಧ್ಯಕ್ಷರಾಗಿ ಮೋಹನ ನಾಯ್ಕ ಮಣ್ಕುಳಿ ಹಾಗೂ ಉಪಾಧ್ಯಕ್ಷರಾಗಿ ನಾರಾಯಣ ಸಣ್ತಮ್ಮಾ ನಾಯ್ಕ ಮಣ್ಕುಳಿ ಇವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.ಆಯ್ಕೆ ಪ್ರಕ್ರಿಯೆಯನ್ನು ಮಂಗಳವಾರ ಇಲ್ಲಿನ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಮೋಹನ್ ನಾಯ್ಕ ಬ್ಬರೇ ನಾಮಪತ್ರ ಸಲ್ಲಿಸಿದ್ದರೆ,ಉಪಾಧ್ಯಕ್ಷ ಸ್ಥಾನಕ್ಕೆ ನಾರಾಯಣ ನಾಯ್ಕ ನಾಮಪತ್ರ ಸಲ್ಲಿಸಿದ್ದರು.ಈ ಇಬ್ಬರು ಅವಿರೋಧ ಆಯ್ಕೆ ಎಂದು ಘೋಷಿಸಿಲಾಯಿತು.
ಕುಮಟಾ ಸಹಾಯಕ ನಿಬಂಧಕ ಕಛೇರಿಯ ಸುಮನಾ ನಾಯ್ಕ ಚುಣಾವಣಾ ಅಧಿಕಾರಿಯಾಗಿ ಭಾಗವಹಿಸಿದ್ದರು. ಸದಸ್ಯರಾದ ವೆಂಕಟೇಶ ನಾಯ್ಕ, ಹರೀಶ ನಾಯ್ಕ, ಶಬರೀಶ ನಾಯ್ಕ, ಸುರೇಶ ನಾಯ್ಕ, ಕುಮಾರ ನಾಯ್ಕ, ರಾಜೇಶ ನಾಯ್ಕ, ಸತೀಶ ನಾಯ್ಕ, ಸುರೇಶ ಮೊಗೇರ,ಜಯಂತ ಗೊಂಡ, ಭಾರತಿ ನಾಯ್ಕ, ವಿಜಯಾ ನಾಯ್ಕ ಹಾಗೂ ಈ ಸಂದರ್ಭದಲ್ಲಿ ಸಂಘದ ಪ್ರಧಾನ ವ್ಯವಸ್ಥಾಪಕ ವಾಸುದೇವ ನಾಯ್ಕ,ಉಪಸ್ಥಿತರಿದ್ದರು.
ಆಯ್ಕೆ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಹೊರ ಬಂದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅವರ ಬೆಂಬಲಿಗರು ಸುತ್ತುವರಿದು ಹೂಮಾಲೆ ಹಾಕಿ ಸಂಭ್ರಮಿಸಿದರು
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ