ಭಟ್ಕಳ: ೨೦೧೧ ಮತ್ತು ೨೦೧೩ ರ ನಡುವೆ ದಾಖಲಾದ ಹಳೆಯ ಪ್ರಕರಣವೊಂದಕ್ಕೆ ಸಂಬoಧಿಸಿದoತೆ ಭಟ್ಕಳ ಬಂದರ್ ರೋಡ್ ೧ನೇ ಕ್ರಾಸ್ ನಿವಾಸಿಯಾಗಿರುವ ಅಮೇರಿಕಾದ ನಾಗರೀಕತ್ವ ಹೊಂದಿರುವ ಇರ್ಷಾದ್ ಕಾಜಿಯಾ ಅಲಿಯಾಸ್ ಅಲಿಶಾ(೫೧) ಎಂಬುವವರನ್ನು ಭಟ್ಕಳದ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಭಟ್ಕಳ ಪೊಲೀಸ್ ಸಹಾಯಕ ಅಧೀಕ್ಷಕರ ಕಚೇರಿ ಹೊರಡಿಸಿದ ಹೇಳಿಕೆಯ ಪ್ರಕಾರ, ಭಟ್ಕಲ್ ನಿವಾಸಿ ಇರ್ಷಾದ್ ಖಾಜಿ ಅಲಿಯಾಸ್ ಅಲಿ ಶಾ (೫೧) ಗೆ ಯುಎಸ್ ಪೌರತ್ವ ಮತ್ತು ಒಸಿಐ [ಸಾಗರೋತ್ತರ ಪೌರತ್ವ] ಸ್ಥಾನಮಾನವಿದೆ. ೨೦೧೧ ಮತ್ತು ೨೦೧೩ ರ ನಡುವೆ ದಾಖಲಾದ ಕೆಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಇರ್ಷಾದ್ ಖಾಜಿಯವರ ಚಲನವಲನ ಬಗ್ಗೆ ನಿಗಾ ಇಟ್ಟಿದ್ದ ಪೊಲೀಸ್ ಇಲಾಖೆಯ ಗುಪ್ತಚರ ಇಲಾಖೆ ಅವರ ನಡವಳಿಕೆಯನ್ನು ಮೇಲ್ವಿಚಾರಣೆ ಮಾಡುತ್ತಿತ್ತು ಎನ್ನಲಾಗಿದ್ದು ಇತ್ತೀಚೆಗೆ ಭಾರತಕ್ಕೆ ಬಂದಿರುವ ಖಚಿತ ಮಾಹಿತಿಯ ಆಧಾರದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಭಟ್ಕಲ್ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ದಿವಾಕರ್ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಭರತ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಎಚ್ಬಿ ಕುಡಗುಂಟಿ ಮತ್ತು ಪೊಲೀಸ್ ಗುಪ್ತಚರ ವಿಭಾಗದ ನರೈನ್ ನಾಯಕ್, ಮಖ್ದೂಮ್ ಸಬ್ ಪೇಟ್ ಖಾನ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭಟ್ಕಳ ಪೊಲೀಸರ ಕ್ರಮವನ್ನು ಶ್ಲಾಘಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವ್ರಾಜು ಟ್ವೀಟ್ ಮಾಡಿದ್ದು ಯುಎಸ್ ಪಾಸ್ಪೋರ್ಟ್ ಮತ್ತು ಒಸಿಐ ಸ್ಥಾನಮಾನ ಹೊಂದಿರುವ ಇರ್ಷಾದ್ ಅಹ್ಮದ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು ಅವರು ಭಟ್ಕಳದಲ್ಲಿರುವುದನ್ನು ಖಚಿತಪಡಿಸಿಕೊಂಡು ಬಂಧಿಸಲಾಗಿದ್ದಾರೆ ಎಂದಿದ್ದಾರೆ.
ಇರ್ಷಾದ್ ಖಾಜಿಯಾ ಅಲಿಯಾಸ್ ಅಲಿಷಾ ಅಮೇರಿಕಾದಲ್ಲಿ ವಾಸವಾಗಿದ್ದು ಅಲ್ಲಿಯೆ ವ್ಯಾಪಾರ ಮಾಡಿಕೊಂಡಿದ್ದು ಅಮೆರಿಕದ ಪೌರತ್ವವನ್ನು ಪಡೆದಿದ್ದಾರೆ. ಕೆಲ ಕೌಟುಂಬಿಕ ಸಮಸ್ಯೆಗಳಿಂದಾಗಿ ವಿವಾದಿತ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದು ಅವರ ಹಲವು ವಿಡಿಯೋಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಕೂಡ ಆಗಿದ್ದವು. ಅಲ್ಲದೆ ಇತ್ತಿಚೆಗೆ ಭಟ್ಕಳದ ಜಮಾಅತುಲ್ ಮುಸ್ಲಿಮೀನ್ ಸಂಸ್ಥೆಯ ಷರಿಯಾ ನ್ಯಾಯಾಲದ ಕುರಿತಂತೆ ಆಕ್ಷೇಪಾರ್ಹ ಪತ್ರವೊಂದನ್ನು ಬರೆದು ಇಲ್ಲಿನ ಪ್ರಮುಖ ವ್ಯಕ್ತಿಗಳಿಗೆ ರವಾನಿಸಿದ್ದೂ ಕೂಡ ವಿವಾದವಾಗಿತ್ತು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.