ಭಟ್ಕಳ: ನಾಯಿ ತಪ್ಪಿಸಲು ಹೋಗಿ ಬೈಕ್ ನಿಯಂತ್ರಿಸಲಾಗದೆ ಬೈಕನಿಂದ ಬಿದ್ದು ಯುವಕನೊರ್ವ ಸಾವನ್ನಪಿರುವ ಘಟನೆ ಭಟ್ಕಳ ತಾಲೂಕಿನ ಬಸ್ತಿಯಲ್ಲಿ ನಡೆದಿದೆ ಮೃತ ಯುವಕ ಮಂಜುನಾಥ ಶನಿಯಾರ ನಾಯ್ಕ (28) ಬಿದ್ರಮನೆ ಕಾಯ್ಕಿಣಿ ನಿವಾಸಿ ಎಂದು ತಿಳಿದು ಬಂದಿದೆ. ಈತ ಗುರುವಾರ ರಾತ್ರಿ 7 ಗಂಟೆಗೆ ಪಲ್ಸರ್ ಬೈಕ್ ನಲ್ಲಿ ಬಸ್ತಿಕಡೆಯಿಂದ ತನ್ನ ಮನೆಯಾದ ಬಿದ್ರಮನೆ ಕಡೆಗೆ ಸಿಮೆಂಟ್ ರಸ್ತೆ ಮೇಲೆ ಅತಿ ವೇಗದಿಂದ ಬೈಕ್ ಚಲಾಯಿಸಿಕೊಂಡು ಬಂದಿದ್ದ ಎನ್ನಲಾಗಿದ್ದು, ಈ ವೇಳೆ ಒಮ್ಮೆಲೇ ನಾಯಿ ಅಡ್ಡ ಬಂದಿರುವುದರಿoದ ನಾಯಿ ತಪ್ಪಿಸಲು ಹೋಗಿ ಬೈಕ್ ನಿಯಂತ್ರಿಸಲಾಗದೆ ಬೈಕ್ ನಿಂದ ಕೆಳಗೆ ಬಿದ್ದಿದ್ದಾನೆ.
ಸಿಮೆಂಟ್ ರಸ್ತೆಯಲ್ಲಿ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ. ಗಾಯಗೊಂಡಿದ್ದ ಯುವಕನನ್ನು ತಕ್ಷಣ ಸಾರ್ವಜನಿಕರು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾನೆ . ಈ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ