ಕೃಷ್ಣರಾಜಪೇಟೆ ತಾಲ್ಲೂಕಿನ ಹೇಮಗಿರಿಯ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಕ್ಷೇತ್ರದಲ್ಲಿರುವ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಪದವಿಪೂರ್ವ ಕಾಲೇಜು ಹಾಗೂ ಚಿನಕುರಳಿಯ ಬಿಜಿಎಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷೆಯಲ್ಲಿ ಶುಭವಾಗಲೆಂದು ಶ್ರೀ ರಂಗನಾಥಸ್ವಾಮಿಯ ಪದತಳದಲ್ಲಿ ಪರೀಕ್ಷಾ ಪ್ರವೇಶಪತ್ರವನ್ನಿಟ್ಟು ವಿದ್ಯಾರ್ಥಿಗಳ ಸಮಕ್ಷಮದಲ್ಲಿ ಹೇಮಗಿರಿ ಶಾಖಾಮಠದ ವ್ಯವಸ್ಥಾಪಕರಾದ ಡಾ.ಜೆ.ಎನ್.ರಾಮಕೃಷ್ಣೇಗೌಡ ವಿಶೇಷಪೂಜೆ ಸಲ್ಲಿಸಿ ಪ್ರಾರ್ಥಿಸಿದರು …
ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಯು ವಿದ್ಯಾರ್ಥಿಗಳಿಗೆ ನಿರ್ಣಾಯಕ ಘಟ್ಟವಾದ್ದರಿಂದ ಪರೀಕ್ಷೆಯಲ್ಲಿ ಶುಭವಾಗಲಿ ಎಂದು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು…
ತಾಯಿ ವಿದ್ಯಾಸರಸ್ವತಿ ಹಾಗೂ ವಿದ್ಯಾಗಣಪತಿಯು ಶುಭ ಕರುಣಿಸಲೆಂದು ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಡಾ.ಜೆ.ಎನ್.ರಾಮಕೃಷ್ಣೇಗೌಡ ತಿಳಿಸಿದರು…
ಹೇಮಗಿರಿ ಬಿಜಿಎಸ್ ಸ್ಕೂಲ್ ಪ್ರಾಂಶುಪಾಲೆ ಪವಿತ್ರ, ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಪ್ರಸಾದೇಗೌಡ, ಪ್ರಸನ್ನ, ಚಿದಂಬರ್ ಮತ್ತು ಭಾಗ್ಯಮ್ಮ ಸೇರಿದಂತೆ ಐನೂರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು…..
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.