ದೇವಿಕೆರೆಯ 14ನೇ ದಿನದ ಕೆರೆಯ ಹೂಳೆತ್ತುವ ಕಾಮಗಾರಿಯಲ್ಲಿ 3 ಜೆಸಿಬಿ ಯಂತ್ರಗಳು, 3ಟಿಪ್ಪರ್ ಲಾರಿಗಳು, 25ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಭಾಗವಹಿಸಿದ್ದು ಈವರೆಗೆ 3500.ಟ್ರ್ಯಾಕ್ಟರ್ ಲೋಡ್ ಫಲವತ್ತಾದ ಗೋಡುಮಣ್ಣು ಹಾಗೂ 300ಟಿಪ್ಪರ್ ಗೋಡುಮಣ್ಣನ್ನು ಈ ಭಾಗದ ರೈತಬಾಂಧವರು ತಮ್ಮ ಹೊಲಗಳು ಹಾಗೂ ತೋಟಗಳಿಗೆ ಸಾಗಿಸಿದ್ದಾರೆ…10ಲಕ್ಷರೂಪಾಯಿಗಳ ವೆಚ್ಚದಲ್ಲಿ ಕೆರೆಯ ಹೂಳನ್ನು ತೆಗೆಸಿ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಪುನರುಜ್ಜೀವನಗೊಳಿಸಿ ಜನಸಾಮಾನ್ಯರಿಗೆ ಕೆರೆಕಟ್ಟೆಗಳ ಮಹತ್ವ, ಅಂತರ್ಜಲದ ಮರುಪೂರಣ, ನೀರಿನ ಮಹತ್ವ ಹಾಗೂ ಜಲಸಾಕ್ಷರತೆಯ ಜಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ನಮ್ಮೂರು ನಮ್ಮಕೆರೆ ಕಾರ್ಯಕ್ರಮದ ಅಡಿಯಲ್ಲಿ ಮಾಡಲಾಗುತ್ತಿದೆ. ಇದುವರೆಗೆ ರಾಜ್ಯದಾದ್ಯಂತ 178 ಕೆರೆಗಳ ಹೂಳೆತ್ತುವ ಕೆಲಸವನ್ನು ಸಂಪೂರ್ಣಗೊಳಿಸಲಾಗಿದೆ…ಗಂಜಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಜನರು ಹಾಗೂ ರೈತ ಬಾಂಧವರು ಕೆರೆ ಹೂಳೆತ್ತುವ ಕಾರ್ಯಕ್ಕೆ ಕೈಜೋಡಿಸಿದ್ದಾರೆ..ರಾಜರ್ಷಿಗಳಾದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರಹೆಗಡೆ ಅವರ ಮಾರ್ಗದರ್ಶನದಲ್ಲಿ ಜಲಸಾಕ್ಷರತೆ ಹಾಗೂ ಜಲಸಂರಕ್ಷಣೆಯ ಬಗ್ಗೆ ಜನಜಾಗೃತಿ ಮೂಡಿಸುವ ಕೆಲಸವನ್ನು ಧರ್ಮಸ್ಥಳ ಸಂಸ್ಥೆಯು ಮಾಡುತ್ತಿದೆ ಎಂದು ಗಂಗಾಧರರೈ ಅಭಿಮಾನದಿಂದ ಹೇಳಿದರು….
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಂಡ್ಯ ಜಿಲ್ಲಾ ನಿರ್ದೇಶಕ ವಿಜಯಕುಮಾರ್ ಸುವರ್ಣ, ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ, ಸಂಸ್ಥೆಯ ಕೃಷಿಅಧಿಕಾರಿ ನಿಂಗಪ್ಪ ಅಗಸರ್, ಮೇಲ್ವಿಚಾರಕ ರಾಜಪ್ಪ, ಗಂಜಿಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ವೀರಾಜಮ್ಮ, ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗೇಗೌಡ ಸೇರಿದಂತೆ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು…..
More Stories
ಭಟ್ಕಳ ಕರಾವಳಿ ಕಾವಲು ಪೊಲೀಸ್ ಠಾಣೆಯವರು ನಡೆಸಿದ ಅಣಕು ಕಾರ್ಯಾಚರಣೆಯಲ್ಲಿ ಆರು ಜನ ಭಯೋತ್ಪಾದಕರನ್ನು ಬಂಧಿಸುವಲ್ಲಿ ಯಶಸ್ವಿ
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ.
ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಭಟ್ಕಳವತಿಯಿಂದ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮೆರವಣಿಗೆ ಮೂಲಕ ಬಂದು ಸಹಾಯಕ ಆಯುಕ್ತರಿಗೆ ಮನವಿ.