ಭಟ್ಕಳ : ತಾಲ್ಲೂಕಿನ ಆಳ್ವೇಕೋಡಿಯಿಂದ ಮೀನುಗಾರಿಕೆಗೆ ತೆರಳಿದ ಪಾತಿದೋಣಿಯೊಂದು ಕಾಗೆಗುಡ್ಡ ಸಮೀಪದಲ್ಲಿ ಗಾಳಿಯ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದಾಗ ಕರಾವಳಿ ಕಾವಲು ಪಡೆಯ ಪೊಲೀಸರು ಗುರುವಾರ ರಕ್ಷಣೆ ಮಾಡಿದ್ದಾರೆ.
ಆಳ್ವೇಕೋಡಿ ಸಮುದ್ರ ತೀರದಿಂದ ಮೀನುಗಾರಿಕೆ ತೆರಳಿದ ಶಿರಾಲಿ ಮೊಗೇರಕೇರಿ ನಿವಾಸಿ ಮಂಜುನಾಥ ಬೈರಾ ಮೊಗೇರ ಎನ್ನುವವರ ಪಾತಿದೋಣಿ ಕಾಗೆಗುಡ್ಡ ಸಮೀಪ ಗಾಳಿಯ ಹೊಡೆತಕ್ಕೆ ಸಿಲುಕಿ ಮುಳುಗಡೆಯಾಗಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕರಾವಳಿ ಕಾವಲು ಪಡೆಯ ಪೊಲೀಸರು ದೋಣಿ ಸಮೇತ ಮೀನುಗಾರನನ್ನು ರಕ್ಷಣೆ ಮಾಡಿದ್ದಾರೆ. ಕರಾವಳಿ ಕಾವಲು ಪಡೆಯ ಕ್ಯಾಪ್ಟನ್ ಮಲ್ಲಪ್ಪ ಗದ್ದಿಗೌಡ, ಸಿಬ್ಬಂದಿಗಳಾದ ಸಂಜೀವ ನಾಯಕ, ರವಿ ಮೆಸ್ತ, ಈರಪ್ಪ ನಾಯ್ಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.