ಮಂಗಳೂರು: ಖಾಸಗಿ ಚಾನಲ್ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾಗಿರುವ ಪರ್ತಕರ್ತ ಸುಖ್ಪಾಲ್ ಪೊಳಲಿ ಅವರ ತಲೆಗೆ ತೀವ್ರ ತರದ ಗಾಯವಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ನಡೆಸಿದ ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ.
ವೈಯಕ್ತಿಕ ವಿಚಾರದ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ ನಿನ್ನೆ ಸಂಜೆ ರಾಡ್ನಿಂದ ಸುಖ್ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ತಿಳಿದುಬಂದಿದೆ. ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಖoಡನೆ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ, ಜಿಲ್ಲಾ ವರದಿಗಾರರಾಗಿರುವ ಸುಖಪಾಲ್ ಪೊಳಲಿ ಅವರ ಮೇಲೆ ಕಳೆದ ರಾತ್ರಿ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಈ ಹಲ್ಲೆಗೆ ಸಂಬoಧಿಸಿದoತೆ ಪೊಲೀಸ್ ಆಯುಕ್ತರನ್ನು ಇಂದು ಭೇಟಿ ಮಾಡಿ ತಪ್ಪಿತಸ್ಥತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಗೂ ಬೆಳ್ತಂಗಡಿ ಯಲ್ಲಿಯೂ ಇದರ ಬಗ್ಗೆ ತೀವ್ರವಾದ ಖಂಡನೆ ವ್ಯಕ್ತವಾಗಿದೆ ಬೆಳ್ತಂಗಡಿಯ ದೃಶ್ಯ ಮಾಧ್ಯಮದ ವರದಿಗಾರರಿಂದ ಹಾಗೂ ಮೀಡಿಯಾ ಕ್ಲಬ್ ವತಿಯಿಂದ ಬೆಳ್ತಂಗಡಿಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಇವರಿಗೆ ಮನವಿ ನೀಡಲಾಯಿತು.
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ