May 4, 2024

Bhavana Tv

Its Your Channel

ಕ್ಷುಲ್ಲಕ ಕಾರಣಕ್ಕೆ ತಂದೆ ಮಕ್ಕಳ ನಡುವೆ ಜಗಳ : ಮಕ್ಕಳಿಂದ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ.

ಉಪ್ಪಿನಂಗಡಿ : ತಂದೆ ಕುಡಿದು ಮನೆಯಲ್ಲಿ ಜಗಳ ಮಾಡುತ್ತಾನೆ ಎಂದು ಕ್ಷುಲ್ಲಕ ಕಾರಣಕ್ಕೆ ಮಕ್ಕಳಿಬ್ಬರು ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂದು ರವಿವಾರ ತಡರಾತ್ರಿ ನಡೆದಿದೆ ಎನ್ನಲಾಗಿದೆ.
ಕೊಲೆಯಾದ ವ್ಯಕ್ತಿ ಧರ್ನಪ್ಪ ಪೂಜಾರಿ ಎಂದು ತಿಳಿದು ಬಂದಿದೆ. ಇವರ ಮಕ್ಕಳಾದ ಮೋನಪ್ಪ ಹಾಗೂ ನವೀನ್ ಎಂಬವರು ಕತ್ತಿಯಿಂದ ಕಡಿದು ತಂದೆಯನ್ನು ಕೊಲೆ ಮಾಡಿದ್ದಾರೆ.ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಧರ್ನಪ್ಪ ಪೂಜಾರಿಯು ಮನೆಯಲ್ಲಿದ್ದ ತೆಂಗಿನ ಮರದಿಂದ ತೆಂಗಿನಕಾಯಿ, ಸೀಯಾಳಗಳನ್ನು ತೆಗೆದು ಮಾರಟ ಮಾಡಿ ಮದ್ಯ ಕುಡಿಯುತ್ತಿದ್ದರು. ನಂತರ ಮನೆಯಲ್ಲಿ ಇದೇ ವಿಚಾರಕ್ಕೆ ತಂದೆ ಮಕ್ಕಳ ನಡುವೆ ಜಗಳ ನಡೆಯುತಿತ್ತು ಎನ್ನಲಾಗಿದೆ.
ರವಿವಾರ ತಡರಾತ್ರಿ ಇದೇ ವಿಚಾರಕ್ಕೆ ಕುಡಿದು ತಂದೆ ಮಕ್ಕಳ ನಡುವೆ ಜಗಳವಾಗಿದೆ. ನಂತರ ಮಕ್ಕಳು ಸಿಟ್ಟಿನಲ್ಲಿ ಕತ್ತಿಯಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ.ಗಂಭೀರ ಗಾಯಗೊಂಡ ಧರ್ನಪ್ಪ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಉಪ್ಪನಂಗಡಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧನವಾದ ಆರೋಪಿ ಮಕ್ಕಳಿಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ

error: