ಉಪ್ಪಿನಂಗಡಿ : ತಂದೆ ಕುಡಿದು ಮನೆಯಲ್ಲಿ ಜಗಳ ಮಾಡುತ್ತಾನೆ ಎಂದು ಕ್ಷುಲ್ಲಕ ಕಾರಣಕ್ಕೆ ಮಕ್ಕಳಿಬ್ಬರು ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂದು ರವಿವಾರ ತಡರಾತ್ರಿ ನಡೆದಿದೆ ಎನ್ನಲಾಗಿದೆ.
ಕೊಲೆಯಾದ ವ್ಯಕ್ತಿ ಧರ್ನಪ್ಪ ಪೂಜಾರಿ ಎಂದು ತಿಳಿದು ಬಂದಿದೆ. ಇವರ ಮಕ್ಕಳಾದ ಮೋನಪ್ಪ ಹಾಗೂ ನವೀನ್ ಎಂಬವರು ಕತ್ತಿಯಿಂದ ಕಡಿದು ತಂದೆಯನ್ನು ಕೊಲೆ ಮಾಡಿದ್ದಾರೆ.ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಧರ್ನಪ್ಪ ಪೂಜಾರಿಯು ಮನೆಯಲ್ಲಿದ್ದ ತೆಂಗಿನ ಮರದಿಂದ ತೆಂಗಿನಕಾಯಿ, ಸೀಯಾಳಗಳನ್ನು ತೆಗೆದು ಮಾರಟ ಮಾಡಿ ಮದ್ಯ ಕುಡಿಯುತ್ತಿದ್ದರು. ನಂತರ ಮನೆಯಲ್ಲಿ ಇದೇ ವಿಚಾರಕ್ಕೆ ತಂದೆ ಮಕ್ಕಳ ನಡುವೆ ಜಗಳ ನಡೆಯುತಿತ್ತು ಎನ್ನಲಾಗಿದೆ.
ರವಿವಾರ ತಡರಾತ್ರಿ ಇದೇ ವಿಚಾರಕ್ಕೆ ಕುಡಿದು ತಂದೆ ಮಕ್ಕಳ ನಡುವೆ ಜಗಳವಾಗಿದೆ. ನಂತರ ಮಕ್ಕಳು ಸಿಟ್ಟಿನಲ್ಲಿ ಕತ್ತಿಯಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ.ಗಂಭೀರ ಗಾಯಗೊಂಡ ಧರ್ನಪ್ಪ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಉಪ್ಪನಂಗಡಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧನವಾದ ಆರೋಪಿ ಮಕ್ಕಳಿಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ