May 5, 2024

Bhavana Tv

Its Your Channel

ಸ್ಕೂಟರ್ ಮತ್ತು ಲಾರಿ ನಡುವೆ ಡಿಕ್ಕಿ : ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವು.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಜಂಕ್ಷನ್ ಬಳಿ ರವಿವಾರ ಸಂಜೆ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿಯಾಗಿ ೪ ವರ್ಷದ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ. .ಗಂಭೀರ ಗಾಯಗೊಂಡಿದ ಮಗುವಿನ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೃಷ್ಣಾಪುರದ ನಿವಾಸಿ ಅಬ್ದುಲ್ ಬಶೀರ್ ತನ್ನ ಸ್ಕೂಟರ್ ನಲ್ಲಿ ಪತ್ನಿ ಮತ್ತು ಮಗು ಶಯಾನ್ ಜೊತೆ ಮಂಗಳೂರಿನಿoದ ಕೃಷ್ಣಾಪುರಕ್ಕೆ ಹೋಗುತ್ತಿದ್ದಾಗ ಬೈಂಕಪಾಡಿ ಜಂಕ್ಷನ್ ಬಳಿ ಲಾರೊಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಆದರಿಂದ ಮೂವರು ರಸ್ತೆಗೆ ಬಿದ್ದಿದ್ದಾರೆ. ಆಗ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.ಗಾಯಗೊಂಡಿದ್ದ ಬಶೀರ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಂಗಳೂರು ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ

error: