May 3, 2024

Bhavana Tv

Its Your Channel

ಗುಡ್ಡ ಕುಸಿದು ಇಬ್ಬರು ಬಾಲಕರು ಮಣ್ಣಿನಡಿ ಸಿಲುಕಿರುವ ಶಂಕೆ .

ಮಂಗಳೂರು : ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದಲೂ ಬಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮಂಗಳೂರು ಹೊರವಲಯದ ಗುರುಪುರದಲ್ಲಿ 4 ಮನೆಗಳ ಮೇಲೆ ಗುಡ್ಡ ಕುಸಿದಿದ್ದು, ಇಬ್ಬರು ಬಾಲಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು ಗುಡ್ಡ ಕುಸಿದಿದೆ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಗುಡ್ಡದ ಮಣ್ಣು ಕುಸಿಯುತ್ತಿರುವುದನ್ನು ಗಮನಿಸಿದ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಆದರೆ ಇಬ್ಬರು ಬಾಲಕರು ಮಾತ್ರ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆನ್ನಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ತಂಡ ಕಾರ್ಯಾಚರಣೆಗೆ ಇಳಿದಿದೆ. ಮಣ್ಣನಡಿಯಲ್ಲಿ ಸಿಲುಕಿರುವ ಬಾಲಕರನ್ನು ಹೊರತೆಗೆಯುವ ಕಾರ್ಯವನ್ನು ಮಾಡಲಾಗುತ್ತಿದೆ. ಆದರೆ ಬಾಲಕರು ಎಲ್ಲಿ ಸಿಲುಕಿದ್ದಾರೆನ್ನುವುದು ತಿಳಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

4 ಮನೆಗಳ ಮೇಲೆ ಮಣ್ಣು ಕುಸಿತಾವಾಗಿದ್ದು, ಮನೆಗಳು ಜಖಂ ಆಗಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ಮನೆಯಲ್ಲಿದ್ದರವನ್ನು ಬೇರೆಡೆಗೆ ಸ್ಥಳಾಂತರಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಜೆಸಿಬಿ ಯಂತ್ರಗಳ ಮೂಲಕ ಕಾರ್ಯಾಚರಣೆ ನಡೆಯುತ್ತಿದೆ.

error: