ಮಂಗಳೂರು : ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದಲೂ ಬಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮಂಗಳೂರು ಹೊರವಲಯದ ಗುರುಪುರದಲ್ಲಿ 4 ಮನೆಗಳ ಮೇಲೆ ಗುಡ್ಡ ಕುಸಿದಿದ್ದು, ಇಬ್ಬರು ಬಾಲಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು ಗುಡ್ಡ ಕುಸಿದಿದೆ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಗುಡ್ಡದ ಮಣ್ಣು ಕುಸಿಯುತ್ತಿರುವುದನ್ನು ಗಮನಿಸಿದ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಆದರೆ ಇಬ್ಬರು ಬಾಲಕರು ಮಾತ್ರ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆನ್ನಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ತಂಡ ಕಾರ್ಯಾಚರಣೆಗೆ ಇಳಿದಿದೆ. ಮಣ್ಣನಡಿಯಲ್ಲಿ ಸಿಲುಕಿರುವ ಬಾಲಕರನ್ನು ಹೊರತೆಗೆಯುವ ಕಾರ್ಯವನ್ನು ಮಾಡಲಾಗುತ್ತಿದೆ. ಆದರೆ ಬಾಲಕರು ಎಲ್ಲಿ ಸಿಲುಕಿದ್ದಾರೆನ್ನುವುದು ತಿಳಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.
4 ಮನೆಗಳ ಮೇಲೆ ಮಣ್ಣು ಕುಸಿತಾವಾಗಿದ್ದು, ಮನೆಗಳು ಜಖಂ ಆಗಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ಮನೆಯಲ್ಲಿದ್ದರವನ್ನು ಬೇರೆಡೆಗೆ ಸ್ಥಳಾಂತರಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಜೆಸಿಬಿ ಯಂತ್ರಗಳ ಮೂಲಕ ಕಾರ್ಯಾಚರಣೆ ನಡೆಯುತ್ತಿದೆ.
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ