ಮಂಗಳೂರು: ಕೊರೊನಾ ತನ್ನ ಅಟ್ಟಹಾಸ ಮುಂದುವರಿಸಿದ್ದು, ಇಂದು ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಐವರು ಬಲಿಯಾಗುವ ಮೂಲಕ ತನ್ನ ಪ್ರತಾಪ ಮೆರೆದಿದೆ.
ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ, ಪುತ್ತೂರಿನ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ, ಮಂಗಳೂರಿನ ಉರ್ವಾಸ್ಟೋರ್ ನ 72 ವರ್ಷದ ವೃದ್ಧ, ಮಂಗಳೂರಿನ ಬಳ್ಳಾಲ್ ಭಾಗ್ ನಿವಾಸಿ 60 ವರ್ಷದ ವೃದ್ಧೆ ಹಾಗು ಮಂಗಳೂರಿನ ಬಂದರು ನಿವಾಸಿ 68 ವರ್ಷದ ವೃದ್ಧೆ ಬಲಿಯಾಗಿದ್ದಾರೆ.
ಈಐದು ಮಂದಿಯಲ್ಲಿ ನಾಲ್ವರು ಮಂಗಳೂರು ಕೋವಿಡ್ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದರೆ , ಪುತ್ತೂರು ಮೂಲದ ಸೋಂಕಿತ ದೇರಳಕಟ್ಟೆ ಖಾಸಗಿ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿತರ ಸಂಖ್ಯೆ ದಿನಂಪ್ರತಿ ಏರಿಕೆಯಾಗುತ್ತಿದ್ದು, ಜಿಲ್ಲೆಯನ್ನು ಮತ್ತೊಮ್ಮೆ ಲಾಕ್ಡೌನ್ ಮಾಡುವಂತೆ ಒತ್ತಾಯ ಕೇಳಿಬಂದಿದೆ.
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ